ಡಾ.ಎಚ್. ಸಿ. ಮಹದೇವಪ್ಪ 
ರಾಜ್ಯ

'ಸಾಮಾಜಿಕ ಬಹಿಷ್ಕಾರ'ಕ್ಕೆ ಮೂರು ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ ದಂಡ: ಮಸೂದೆಗೆ ವಿಧಾನಸಭೆ ಅನುಮೋದನೆ!

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹಾದೇವಪ್ಪ, ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆಯನ್ನು ಚರ್ಚೆಗೆ ಮಂಡಿಸಿದರು.

ಬೆಳಗಾವಿ: ಯಾವುದೇ ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ 1 ಲಕ್ಷ ರೂಪಾಯಿವರೆಗೂ ದಂಡ ಹಾಗೂ ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಮಸೂದೆಗೆ ವಿಧಾನಸಭೆ ಗುರುವಾರ ಸರ್ವಾನುಮತದಿಂದ ಅನುಮೋದನೆ ನೀಡಿತು.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹಾದೇವಪ್ಪ, ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆಯನ್ನು ಚರ್ಚೆಗೆ ಮಂಡಿಸಿದರು.

ಬಳಿಕ ಮಾತನಾಡಿದ ಸಚಿವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ ಸಾಮಾಜಿಕವಾಗಿ ಬಹಿಷ್ಕಾರ ಹಾಕುವುದು ನಡೆದಿದೆ. ಇದು ಮಾನವ ಹಕ್ಕುಗಳ, ನಾಗರಿಕ ಹಕ್ಕುಗಳ ಉಲ್ಲಂಘನೆ, ಇದನ್ನು ನಿಷೇಧಿಸಲು ಐತಿಹಾಸಿಕ ಮಸೂದೆಯನ್ನು ರೂಪಿಸಲಾಗಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, 21ನೇ ಶತಮಾನದಲ್ಲಿ ನಾವೆಲ್ಲರೂ ಒಂದೇ ಎಂದು ಭಾಷಣ ಮಾಡಿದರೂ ನಿರ್ಬಂಧ, ತಾರತಮ್ಯ ಮುಂದುವರಿದಿದೆ. ಹೋಟೆಲ್, ಕ್ಷಾರ ಸೇರಿದಂತೆ ಇತರ ಸೇವೆ ನಿರ್ಬಂಧಿಸುವುದು, ಬಹಿಷ್ಕಾರ ಹಾಕುವುದು ಅಕ್ಷಮ್ಯವಾಗಿದ್ದು, ಕಾಯ್ದೆ ಜಾರಿಯಾದಾಗ ಹಳ್ಳಿಗಳಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ, ದಂಡ ಹಾಗೂ ಶಿಕ್ಷೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಬಿಜೆಪಿಯ ಶಾಸಕರಾದ ಎಸ್. ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಸಿಮೆಂಟ್ ಮಂಜು ಹಾಗೂ ಜೆಡಿಎಸ್ ನ ನೇಮಿರಾಜ ನಾಯ್ಕ್ ಮತ್ತಿತರರು ಮಾತನಾಡಿದರು.

ಕಾಂಗ್ರೆಸ್ ನ ಟಿ. ಬಿ. ಜಯಚಂದ್ರ ಮಾತನಾಡಿ, ಸಾಮಾಜಿಕ ಬಹಿಷ್ಕಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಿ ಮಸೂದೆಗೆ ತಿದ್ದುಪಡಿ ತರಬೇಕು ಎಂದು ಸಲಹೆಯನ್ನು ಅಳವಡಿಸಿಕೊಳ್ಳುವುದಾಗಿ ಮಹದೇವಪ್ಪ ಭರವಸೆ ನೀಡಿದರು. ಬಳಿಕ ಸದನ ಪಕ್ಷಾತೀತವಾಗಿ ಮಸೂದೆಗೆ ಅನುಮೋದನೆ ನೀಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!

SCROLL FOR NEXT