ಕೆ. ಎಚ್. ಮುನಿಯಪ್ಪ 
ರಾಜ್ಯ

BPL ಕಾರ್ಡ್​​ದಾರರಿಗೆ ಸಿಹಿಸುದ್ದಿ?: ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ

ಕೇಂದ್ರ ಸರ್ಕಾರ, ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ.

ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಗುರುವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20 ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಆದಾಯ ಮಿತಿ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದರು.

ಕೇಂದ್ರ ಸರ್ಕಾರ, ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್​ ಪಡೆದಿವೆ. ರಾಜ್ಯವು ಜಿಎಸ್ಟಿ , ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶ ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ ಅದಕ್ಕೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್​​ ಪಡೆದುಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಹಾಗೂ ಹೊರಗಿಡುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಆದಾಯ, ಸೇವಾ ಹಾಗೂ ಜಿಎಸ್ಟಿ ತೆರಿಗೆ ಪಾವತಿ ಮಾಡುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಾಧಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿದಲ್ಲಿ, ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ 15 ದಿನದ ಒಳಗಾಗಿ ಬಿಪಿಎಲ್ ಕಾರ್ಡ್ ಪುನಃ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ