ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ನಮಗೆ ಬಂದಿರುವುದು ಪಿತ್ರಾರ್ಜಿತ ಆಸ್ತಿ, ಇಲ್ಲದಿರುವುದು ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ: BJP ವಿರುದ್ಧ ಕೃಷ್ಣ ಬೈರೇಗೌಡ ಸಿಡಿಮಿಡಿ

ಆರೋಪ ಮಾಡಬೇಕು ಎಂಬ ಕಾರಣಕ್ಕೆ ಯಾವುದೇ ವಿಚಾರ ಇಲ್ಲದಿದ್ದರೂ ಹುಡುಕಿ ಆರೋಪ ಮಾಡಲಾಗುತ್ತಿದೆ. ಗರುಡನಪಾಳ್ಯದ ಭೂಮಿ ನನ್ನ ತಾತ ಅವರಿಂದ ಬಂದ ಪಿತ್ರಾರ್ಜಿತ ಆಸ್ತಿ.

ಬೆಂಗಳೂರು: ನಮ್ಮ ತಾತನವರಿಂದ ನಮಗೆ ಆಸ್ತಿ ಬಂದಿದೆ. ಇಲ್ಲದಿರುವುದ ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ ಎಂದು ಭೂ ಕಬಳಿಕೆ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಆರೋಪ ಮಾಡಬೇಕು ಎಂಬ ಕಾರಣಕ್ಕೆ ಯಾವುದೇ ವಿಚಾರ ಇಲ್ಲದಿದ್ದರೂ ಹುಡುಕಿ ಆರೋಪ ಮಾಡಲಾಗುತ್ತಿದೆ. ಗರುಡನಪಾಳ್ಯದ ಭೂಮಿ ನನ್ನ ತಾತ ಅವರಿಂದ ಬಂದ ಪಿತ್ರಾರ್ಜಿತ ಆಸ್ತಿ. ನಮ್ಮ ತಂದೆಯ ಮೂಲಕ ಭಾಗವಾಗಿ ನಮಗೆ ಬಂದಿದೆ. ಅದನ್ನು ಯಾವ ಮೂಲದಿಂದಲಾದರೂ ಪರಿಶೀಲಿಸಿಕೊಳ್ಳಲಿ. ಯಾವ ಕಾಲದಲ್ಲಿ ಏನೇನಾಗಿದೆ ಎಂಬುದನ್ನು ಪರೀಕ್ಷಿಸಲಿ ಎಂದು ಹೇಳಿದರು.

‘ನಾನು ಸರ್ಕಾರದಲ್ಲಿ ಸಚಿವನಾಗಿದ್ದೇನೆ. ಇಲಾಖಾ ಅಥವಾ ಸರ್ಕಾರದ ತನಿಖೆ ನಡೆದರೆ ಪಕ್ಷಪಾತವಾಗುತ್ತದೆ ಎಂದಾದರೆ ಯಾವುದಾದರೂ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಲಿ. ಲೋಕಾಯುಕ್ತಕ್ಕೆ ನ್ಯಾಯಾಲಯಕ್ಕೆ ದೂರು ನೀಡಿ ತನಿಖೆ ಮಾಡಿಸಲಿ. ಈ ವಿಚಾರದಲ್ಲಿ ನನ್ನ ತಪ್ಪಿದೆ ಎಂದು ಸಾಬೀತಾದರೆ ನಾನು ತಲೆಬಾಗುತ್ತೇನೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕೆಸರೆರಚಾಟ ಮಾಡುವುದು ಸರಿಯಲ್ಲ. ಇಲ್ಲ ಸಲ್ಲದ ಆರೋಪ ಮಾಡುವುದನ್ನೇ ವೃತ್ತಿಯಾಗಿಸಿಕೊಂಡವರಷ್ಟೇ ಈ ರೀತಿ ಮಾಡುತ್ತಾರೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್