ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ನಮಗೆ ಬಂದಿರುವುದು ಪಿತ್ರಾರ್ಜಿತ ಆಸ್ತಿ, ಇಲ್ಲದಿರುವುದು ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ: BJP ವಿರುದ್ಧ ಕೃಷ್ಣ ಬೈರೇಗೌಡ ಸಿಡಿಮಿಡಿ

ಆರೋಪ ಮಾಡಬೇಕು ಎಂಬ ಕಾರಣಕ್ಕೆ ಯಾವುದೇ ವಿಚಾರ ಇಲ್ಲದಿದ್ದರೂ ಹುಡುಕಿ ಆರೋಪ ಮಾಡಲಾಗುತ್ತಿದೆ. ಗರುಡನಪಾಳ್ಯದ ಭೂಮಿ ನನ್ನ ತಾತ ಅವರಿಂದ ಬಂದ ಪಿತ್ರಾರ್ಜಿತ ಆಸ್ತಿ.

ಬೆಂಗಳೂರು: ನಮ್ಮ ತಾತನವರಿಂದ ನಮಗೆ ಆಸ್ತಿ ಬಂದಿದೆ. ಇಲ್ಲದಿರುವುದ ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ ಎಂದು ಭೂ ಕಬಳಿಕೆ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಆರೋಪ ಮಾಡಬೇಕು ಎಂಬ ಕಾರಣಕ್ಕೆ ಯಾವುದೇ ವಿಚಾರ ಇಲ್ಲದಿದ್ದರೂ ಹುಡುಕಿ ಆರೋಪ ಮಾಡಲಾಗುತ್ತಿದೆ. ಗರುಡನಪಾಳ್ಯದ ಭೂಮಿ ನನ್ನ ತಾತ ಅವರಿಂದ ಬಂದ ಪಿತ್ರಾರ್ಜಿತ ಆಸ್ತಿ. ನಮ್ಮ ತಂದೆಯ ಮೂಲಕ ಭಾಗವಾಗಿ ನಮಗೆ ಬಂದಿದೆ. ಅದನ್ನು ಯಾವ ಮೂಲದಿಂದಲಾದರೂ ಪರಿಶೀಲಿಸಿಕೊಳ್ಳಲಿ. ಯಾವ ಕಾಲದಲ್ಲಿ ಏನೇನಾಗಿದೆ ಎಂಬುದನ್ನು ಪರೀಕ್ಷಿಸಲಿ ಎಂದು ಹೇಳಿದರು.

‘ನಾನು ಸರ್ಕಾರದಲ್ಲಿ ಸಚಿವನಾಗಿದ್ದೇನೆ. ಇಲಾಖಾ ಅಥವಾ ಸರ್ಕಾರದ ತನಿಖೆ ನಡೆದರೆ ಪಕ್ಷಪಾತವಾಗುತ್ತದೆ ಎಂದಾದರೆ ಯಾವುದಾದರೂ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಲಿ. ಲೋಕಾಯುಕ್ತಕ್ಕೆ ನ್ಯಾಯಾಲಯಕ್ಕೆ ದೂರು ನೀಡಿ ತನಿಖೆ ಮಾಡಿಸಲಿ. ಈ ವಿಚಾರದಲ್ಲಿ ನನ್ನ ತಪ್ಪಿದೆ ಎಂದು ಸಾಬೀತಾದರೆ ನಾನು ತಲೆಬಾಗುತ್ತೇನೆ. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಕೆಸರೆರಚಾಟ ಮಾಡುವುದು ಸರಿಯಲ್ಲ. ಇಲ್ಲ ಸಲ್ಲದ ಆರೋಪ ಮಾಡುವುದನ್ನೇ ವೃತ್ತಿಯಾಗಿಸಿಕೊಂಡವರಷ್ಟೇ ಈ ರೀತಿ ಮಾಡುತ್ತಾರೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Pariksha Pe Charcha 2026: ಅಗ್ಗದಲ್ಲಿ ಡೇಟಾ ಸಿಗುತ್ತದೆ ಎಂದು ಇಂಟರ್ನೆಟ್ ಲ್ಲಿ ಸಮಯ ಕಳೆಯಬೇಡಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ನೀಡಿದ ಸಲಹೆಗಳೇನು?-Video

'ಮೊದಲು ಇರಾನ್ ತೊರೆಯಿರಿ': ಡೊನಾಲ್ಡ್ ಟ್ರಂಪ್ ದಾಳಿ ಎಚ್ಚರಿಕೆ ಬೆನ್ನಲ್ಲೇ ಅಮೆರಿಕನ್ನರಿಗೆ ವೈಟ್ ಹೌಸ್ ಕೊನೆಯ ಎಚ್ಚರಿಕೆ!

T20 World Cup 2026: 'ನಮಗೋಸ್ಕರ ಭಾರತ ವಿರುದ್ಧ ಆಡಿ': ಆರ್ಥಿಕ ಸಂಕಷ್ಟದಲ್ಲಿರುವ 'ಆತಿಥೇಯ' ಶ್ರೀಲಂಕಾ ಪಾಕಿಸ್ತಾನಕ್ಕೆ ಮನವಿ

'ನೀನು Indian-Bollywood...ನಾವು ಕೊರಿಯನ್ನರು; ಕಿರಿಯ ತಂಗಿಯನ್ನೇ ದ್ವೇಷಿಸುತ್ತಿದ್ದ ಮೂವರು ಸೋದರಿಯರು, ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!

'ಈ ಸಲವೂ ಕಪ್ ನಮ್ದು': ಎರಡನೇ ಬಾರಿ WPL ಕಿರೀಟ ಗೆದ್ದ RCB, ಗೆಲುವಿನ ದಡ ಮುಟ್ಟಿಸಿದ ಸ್ಮೃತಿ ಮಂಧಾನಾ-ಜಾರ್ಜಿಯಾ ವೋಲ್ ಜತೆಯಾಟ-Video

SCROLL FOR NEXT