ಬಂಧಿತ ಆರೋಪಿ ಶಿವಕುಮಾರ್  
ರಾಜ್ಯ

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ; ಆರೋಪಿ ಬಂಧನ

ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂಬುದಾಗಿ ರಿಕಿ ಕೇಜ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಆರೋಪಿಗಳು ಕೃತ್ಯ ಎಸಗುತ್ತಿರುವ ದೃಶ್ಯಾವಳಿ ವಿಡಿಯೊಗಳನ್ನೂ ಅಪ್‌ಲೋಡ್ ಮಾಡಿದ್ದರು.

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರ ಮನೆಯ ನೀರಿನ ಸಂಪ್‌ನ ಕಬ್ಬಿಣದ ಮುಚ್ಚಳವನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಇಂದಿರಾನಗರ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ನೀಲಸಂದ್ರದ ಶಿವಕುಮಾರ್ (19) ಬಂಧಿತ ಆರೋಪಿ. ಆರೋಪಿ ಗುಜರಿ ವ್ಯಾಪಾರ ಮಾಡುತ್ತಿದ್ದ, ಕದ್ದ ಮುಚ್ಚಳವನ್ನು ರೂ.700ಕ್ಕೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ.

ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂಬುದಾಗಿ ರಿಕಿ ಕೇಜ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಆರೋಪಿಗಳು ಕೃತ್ಯ ಎಸಗುತ್ತಿರುವ ದೃಶ್ಯಾವಳಿ ವಿಡಿಯೊಗಳನ್ನೂ ಅಪ್‌ಲೋಡ್ ಮಾಡಿದ್ದರು.

ಡಿ.12ರ ಸಂಜೆ 6 ಗಂಟೆಯ ಸುಮಾರಿಗೆ ಈ ಘಟನೆ ನಡೆದಿತ್ತು. ಇಬ್ಬರು ಯುವಕರು ಬಂದು ಗೇಟ್‌ ಎದುರು ಸ್ಕೂಟರ್ ನಿಲುಗಡೆ ಮಾಡಿದ್ದರು. ಆದಾದ ಮೇಲೆ ಒಬ್ಬ ನಿಧಾನವಾಗಿ ಗೇಟ್‌ ತೆರೆದು, ಒಳಗೆ ಹೋಗಿ ಸಂಪ್‌ಗೆ ಅಳವಡಿಸಿದ್ದ ಕಬ್ಬಿಣದ ಮುಚ್ಚಳವನ್ನು ಕಳವು ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ, 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

5ನೇ T20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 30 ರನ್ ಗಳ ರೋಚಕ ಜಯ; 3-1 ಸರಣಿ ಗೆಲುವು

Load shedding In bangalore: ಡಿ.20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆ ವರೆಗೂ ವಿದ್ಯುತ್ ಕಡಿತ

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

SCROLL FOR NEXT