ಕೃಷ್ಣ ಭೈರೇಗೌಡ 
ರಾಜ್ಯ

ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಶೇ.3: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಸರ್ಕಾರವು ಯಾವುದೇ ತುರ್ತು ಪರಿಸ್ಥಿತಿಗಳನ್ನು ಎದುರಿಸಿದರೆ ಈ ಮಿತಿಯನ್ನು ಉಲ್ಲಂಘಿಸಬಹುದು ಎಂದು ಅವರು ಹೇಳಿದರು.

ಬೆಳಗಾವಿ: ರಾಜ್ಯ ಸರ್ಕಾರವು ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆಯನ್ನು ಅನುಸರಿಸಲು ಬದ್ಧವಾಗಿದೆ. ಪ್ರಸ್ತುತ ಒಟ್ಟು ರಾಜ್ಯ ದೇಶೀಯ ಉತ್ಪನ್ನ (GSDP)ದ ಶೇಕಡಾ 3ಕ್ಕೆ ಬದ್ಧವಾಗಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಸರ್ಕಾರವು ಯಾವುದೇ ತುರ್ತು ಪರಿಸ್ಥಿತಿಗಳನ್ನು ಎದುರಿಸಿದರೆ ಈ ಮಿತಿಯನ್ನು ಉಲ್ಲಂಘಿಸಬಹುದು ಎಂದು ಅವರು ಹೇಳಿದರು.

ಪೂರಕ ಬಜೆಟ್ ಅಂದಾಜಿನ ಮೇಲಿನ ಚರ್ಚೆಯಲ್ಲಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ರಾಜ್ಯದ ಹೆಚ್ಚಿದ ಹಣಕಾಸಿನ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಸರ್ಕಾರ ನೀಡಿದ ದತ್ತಾಂಶದ ಪ್ರಕಾರ, ಅದು 2.95% ನಲ್ಲಿಯೇ ಉಳಿದಿದೆ, ಇದು ಮಿತಿಯ ಹತ್ತಿರದಲ್ಲಿದೆ ಎಂದರು.

2023-24 ರಲ್ಲಿ 65,525 ರೂಪಾಯಿಗಳಷ್ಟಿದ್ದ ಕೊರತೆಯನ್ನು ಆರ್ಥಿಕ ವರ್ಷ 2026ರಲ್ಲಿ 90,420 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಅಂದರೆ GSDP ಯ 2.55 ರಿಂದ 2.99% ಕ್ಕೆ ಹೆಚ್ಚಿಸಲಾಗಿದೆ ಎಂದರು. ಕರ್ನಾಟಕವು ಆರ್ಥಿಕವಾಗಿ ಉತ್ತಮವಾಗಿ ನಿರ್ವಹಿಸಲ್ಪಡುವ ರಾಜ್ಯವಾಗಿದ್ದರೂ, ರಾಜ್ಯದ ಸಾಲವು ಕಳೆದ ವರ್ಷದ 3.24 ಲಕ್ಷ ಕೋಟಿ ರೂಪಾಯಿಗಳಿಂದ 4.08 ಲಕ್ಷ ಕೋಟಿಗೆ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಂದಾಜು 2.08 ಲಕ್ಷ ಕೋಟಿ ರೂಪಾಯಿಗೆ ಹೋಲಿಸಿದರೆ ವರಮಾನ ಸಂಗ್ರಹ ಕೇವಲ 90,998 ಕೋಟಿ ಮಾತ್ರ. ಸರ್ಕಾರದ ಕಳಪೆ ನಿರ್ವಹಣೆ ಮುಂದುವರಿದರೆ, ಹಣಕಾಸಿನ ಕೊರತೆಯು ಶೇಕಡಾ 3ರ ಮಿತಿಯನ್ನು ಮೀರಬಹುದು ಎಂದು ಅಶೋಕ ಹೇಳಿದರು. ಆದರೆ ಸರ್ಕಾರವು ಮಿತಿಯನ್ನು ದಾಟಲು ಬಿಡುವುದಿಲ್ಲ ಎಂದು ಕೃಷ್ಣ ಭೈರೇಗೌಡ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ': ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Gold Smuggling Case: ನಟಿ ರನ್ಯಾ ರಾವ್​ಗಿಲ್ಲ ರಿಲೀಫ್; ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶ

Video: ಬುರ್ಜ್ ಖಲೀಫಾಗೆ ಬಡಿದ ಸಿಡಿಲು; ಅದ್ಭುತ ವಿಡಿಯೋ ಹಂಚಿಕೊಂಡ ದುಬೈ ಕ್ರೌನ್ ಪ್ರಿನ್ಸ್; ಸಿಕ್ಕಾಪಟ್ಟೆ ವೈರಲ್!

SCROLL FOR NEXT