ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್  
ರಾಜ್ಯ

ಭಾರತದ ಪ್ರಗತಿಗೆ ಅಲ್ಪಸಂಖ್ಯಾತರು ಒಗ್ಗೂಡಿ: ಶಾಸಕ ರಿಜ್ವಾನ್ ಅರ್ಷದ್

ಸಂಸತ್ತಿನಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಿರ್ದಿಷ್ಟ ನಿರ್ಣಯಗಳು ಮತ್ತು ಕಾನೂನುಗಳನ್ನು ತರಲಾಗುತ್ತಿದೆ. ಧರ್ಮಾಂತರ ನಿಷೇಧ ಕಾಯ್ದೆ, ವಕ್ಫ್ ತಿದ್ದುಪಡಿ ಮಸೂದೆ, ಸಿಎಎ–ಎನ್‌ಆರ್‌ಸಿ ಮುಂತಾದವುಗಳು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಜಾರಿಗೆ ತರಲಾಗಿದೆ.

ಬೆಂಗಳೂರು: ಆಹಾರ, ಉಡುಪು, ಭಾಷೆ ಮತ್ತು ಸಂಸ್ಕೃತಿಯ ಆಯ್ಕೆಯ ವಿಚಾರದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಈ ಸತ್ಯವನ್ನು ಒಪ್ಪಿಕೊಂಡು ಮುಂದುವರೆಯದಿದ್ದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಗುರುವಾರ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ರಿಜ್ವಾನ್ ಅರ್ಷದ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇಂತಹ ಸೂಕ್ಷ್ಮ ಸಮಯದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡಿತಗೊಳಿಸದೆ ಸಂವಿಧಾನವನ್ನು ಸರಿಯಾಗಿ ಜಾರಿಗೆ ತರುತ್ತಿದ್ದಾರೆಯೇ ಎಂಬುದನ್ನು ಗಮನಿಸುವುದು ಅತ್ಯಂತ ಅಗತ್ಯ. ಸಂಸತ್ತಿನಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಿರ್ದಿಷ್ಟ ನಿರ್ಣಯಗಳು ಮತ್ತು ಕಾನೂನುಗಳನ್ನು ತರಲಾಗುತ್ತಿದೆ. ಧರ್ಮಾಂತರ ನಿಷೇಧ ಕಾಯ್ದೆ, ವಕ್ಫ್ ತಿದ್ದುಪಡಿ ಮಸೂದೆ, ಸಿಎಎ–ಎನ್‌ಆರ್‌ಸಿ ಮುಂತಾದವುಗಳು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಜಾರಿಗೆ ತರಲಾಗಿದೆ.

ಹೀಗಾಗಿ ಎಲ್ಲಾ ಅಲ್ಪಸಂಖ್ಯಾತರು ಒಗ್ಗೂಡಿ ಭಾರತವನ್ನು ‘ವಿಶ್ವಗುರು’ವಾಗಿಸಲು ಕೆಲಸ ಮಾಡಬೇಕು. ಕೋಮು ರಾಜಕೀಯವನ್ನು ಪ್ರೋತ್ಸಾಹಿಸುವುದನ್ನು ನಿಲ್ಲಿಸಲು ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಸ್ಲಿಮರು, ಪಾರ್ಸಿ, ಸಿಖ್, ಬೌದ್ಧ ಮತ್ತು ಜೈನ್ ಸಮುದಾಯಗಳಿಗೆ ಸೇರಿದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ