ರಾಜ್ಯ

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೀಡಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೀಡಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಸಿಎನ್ ಚಿನ್ನಯ್ಯ, ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬುರುಡೆ ಗ್ಯಾಂಗ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. 2012ರ ಅಕ್ಟೋಬರ್ 9ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಕಾರ್ಯಕರ್ತರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆನ್ನವರ್, ಟಿ ಜಯಂತ್, ವಿಠಲ ಗೌಡ ಮತ್ತು ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಿ ಚಿನ್ನಯ್ಯ ದೂರು ನೀಡಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆ ಮತ್ತು ನೂರಾರು ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನೂ ನೀಡಿದ ಹೇಳಿಕೆಗಳನ್ನು ಹಿಂತೆಗೆದುಕೊಂಡಿರುವುದರಿಂದ ಬುರುಡೆ ಗ್ಯಾಂಗ್ ತನಗೆ ಮತ್ತು ತನ್ನ ಹೆಂಡತಿಗೆ ಹಾನಿ ಮಾಡಬಹುದು ಎಂದು ಆರೋಪಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಚಿನ್ನಯ್ಯ ಮೇಲೆ ಒತ್ತಡ ಹೇರಿದ ಆರೋಪ ಬುರುಡೆ ಗ್ಯಾಂಗ್ ಮೇಲಿದೆ. ಡಿಸೆಂಬರ್ 18ರಂದು ಜಾಮೀನಿನ ಮೇಲೆ ಶಿವಮೊಗ್ಗ ಜಿಲ್ಲಾ ಜೈಲಿನಿಂದ ಬಿಡುಗಡೆಯಾದ ಚಿನ್ನಯ್ಯ, ಅದೇ ಸಂಜೆ ತನ್ನ ಪತ್ನಿ ಮತ್ತು ಸಹೋದರಿಯೊಂದಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ತಮಗೆ ಭದ್ರತೆ ನೀಡುವಂತೆ ಪೊಲೀಸರು ಒತ್ತಾಯಿಸಿದ್ದಾರೆ. ದೂರಿನ ಕುರಿತು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಉಪ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಬಹು ಅತ್ಯಾಚಾರ, ಕೊಲೆ ಮತ್ತು ಸಮಾಧಿಗಳ ಆರೋಪಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ), ಭಾರತೀಯ ನಾಗರಿಕ ಸುರಕ್ಷಾ ಸಂಹಿತ (ಬಿಎನ್‌ಎಸ್‌ಎಸ್) ಸೆಕ್ಷನ್ 215ರ ಅಡಿಯಲ್ಲಿ ಬೆಳ್ತಂಗಡಿಯ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 3,900 ಪುಟಗಳ ವರದಿಯನ್ನು ಸಲ್ಲಿಸಿದೆ. ಚಿನ್ನಯ್ಯ ಸೇರಿದಂತೆ ಆರು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!