ರಾಜ್ಯ

'ಬೆಂಗಳೂರಲ್ಲಿ ರಸ್ತೆಗುಂಡಿಯೂ ಇಲ್ಲ, ಯಾವ ಸಮಸ್ಯೆಯೂ ಇಲ್ಲ, ಅವೆಲ್ಲ ಸೋಷಿಯಲ್ ಮೀಡಿಯಾ ಸೃಷ್ಟಿ': ಡಿ ಕೆ ಶಿವಕುಮಾರ್, ಬಿಜೆಪಿ ತಿರುಗೇಟು-Video

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ ರಸ್ತೆಗಳು ಇಲ್ಲ, ಯಾವುದೇ ಸಮಸ್ಯೆಯಿಲ್ಲ. ಇದೆಲ್ಲ ಕೇವಲ ಸೋಷಿಯಲ್ ಮೀಡಿಯಾಗಳಲ್ಲಿ ಸೃಷ್ಟಿ ಮಾಡುವುದಷ್ಟೆ ಎಂದರು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯಾವುದೇ ರಸ್ತೆಗುಂಡಿ ಸಮಸ್ಯೆಯಿಲ್ಲ, ಅವೆಲ್ಲ ಸೋಷಿಯಲ್ ಮೀಡಿಯಾ ಸೃಷ್ಟಿ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ ರಸ್ತೆಗಳು ಇಲ್ಲ, ಯಾವುದೇ ಸಮಸ್ಯೆಯಿಲ್ಲ. ಇದೆಲ್ಲ ಕೇವಲ ಸೋಷಿಯಲ್ ಮೀಡಿಯಾಗಳಲ್ಲಿ ಸೃಷ್ಟಿ ಮಾಡುವುದಷ್ಟೆ ಎಂದರು.

ಬೆಂಗಳೂರಿನಲ್ಲಿ ಎಲ್ಲಾ ಚಟುವಟಿಕೆಗಳು ಸುಸೂತ್ರವಾಗಿ ಸುಗಮವಾಗಿ ಸಾಗುತ್ತಿಲ್ಲ, ಜಗತ್ತಿನ ನಾನಾ ಭಾಗಗಳಿಂದ ಇಲ್ಲಿಗೆ ಜನರು ಬರುತ್ತಾರೆ. ಇಲ್ಲಿ ಹೂಡಿಕೆ ಮಾಡುತ್ತಾರೆ, ಕೆಲಸ ಮಾಡುತ್ತಾರೆ, ಜೀವನ ಮಾಡುತ್ತಾರೆ.

ಇದಕ್ಕೆ ರಸ್ತೆಗುಂಡಿಗಳಿರುವ ಬೆಂಗಳೂರಿನ ರಸ್ತೆಯ ವಿಡಿಯೊ ಪೋಸ್ಟ್ ಮಾಡಿ ಎಂದಿನ ಶೈಲಿಯಲ್ಲಿ ಟೀಕಿಸಿರುವ ಪ್ರತಿಪಕ್ಷ ಬಿಜೆಪಿ, ಡಿಸಿಎಂ ಡಿ ಕೆ ಶಿವಕುಮಾರ್ ಓಳು ಬಿಡುತ್ತಿದ್ದಾರೆ ಎಂದು ಆರೋಪಿಸಿದೆ.

ಅನೇಕ ಸಾಮಾಜಿಕ ಕಾರ್ಯಕರ್ತರು, ನಾಗರಿಕರು ಸಹ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸರ್ಕಾರದ ಜನಪ್ರತಿನಿಧಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡಿ ಹದಗೆಟ್ಟ ರಸ್ತೆಗಳು, ಹೊಂಡಗುಂಡಿ ಬಿದ್ದ ರಸ್ತೆಗಳ ಫೋಟೋ-ವಿಡಿಯೊಗಳನ್ನು ಹಾಕಿ ಟೀಕಿಸುತ್ತಿದ್ದಾರೆ.

ಬೆಂಗಳೂರಿನ ಶಿಥಿಲಗೊಂಡ ರಸ್ತೆಗಳ ಮೇಲೆ ಮತ್ತೊಮ್ಮೆ ಬೆಳಕು ಚೆಲ್ಲುವ ವಿಡಿಯೊ ಇದಾಗಿದೆ. ಪ್ರಯಾಣಿಕರಿಗೆ ಗಂಭೀರ ಅಪಾಯವನ್ನುಂಟುಮಾಡುವ ರಸ್ತೆಯಲ್ಲಿನ ಆಳವಾದ ಬಿರುಕುಗಳನ್ನು ತೋರಿಸುವ ದೃಶ್ಯಗಳಿವೆ.

ನಾಗರಿಕರು ಮತ್ತು ಕಾರ್ಯಕರ್ತರು ರಸ್ತೆ ಗುಣಮಟ್ಟ ಮತ್ತು ಸರ್ಕಾರದ ಕೆಲಸದ ವೈಖರಿಯನ್ನು ಎತ್ತಿ ತೋರಿಸುತ್ತಿದ್ದಾರೆ. (ವಿಡಿಯೊ ಕೃಪೆ ಸಲಾರ್ ನ್ಯೂಸ್-Video credit)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

SCROLL FOR NEXT