ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

ಮುಂದಿನ ವಾರ ಫಲಾನುಭವಿಗಳ ಖಾತೆಗೆ 'ಗೃಹಲಕ್ಷ್ಮಿ' ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಹಣ ಬಿಡುಗಡೆ ಆಗುತ್ತದೆ ಎಂದರು.

ಬೆಳಗಾವಿ: ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಖಾತೆ ಹಣವನ್ನು ಫಲಾನುಭವಿಗಳ ಖಾತೆಗೆ ಸರ್ಕಾರ ಹಾಕಿಲ್ಲ ಎಂದು ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರ ಚರ್ಚೆಯಾಗಿತ್ತು.

ವರ್ಷಾಂತ್ಯದಲ್ಲಿ ಅದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ಕೊಟ್ಟಿದ್ದಾರೆ. ನಾಳೆ ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತದೆ ಎಂದು ತಿಳಿಸಿದ್ದಾರೆ

ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಹಣ ಬಿಡುಗಡೆ ಆಗುತ್ತದೆ ಎಂದರು.

ಮೃತಪಟ್ಟವರ ಖಾತೆ​​ಗೆ ಗೃಹಲಕ್ಷ್ಮೀ ಯೋಜನೆ ಹಣಕ್ಕೆ ಬ್ರೇಕ್​​

ಮೃತರ ಖಾತೆ​​ಗೂ ಇಷ್ಟು ದಿನ ಮಾಹಿತಿ ಕೊರತೆಯಿಂದ ಗೃಹಲಕ್ಷ್ಮೀ ಯೋಜನೆ ಹಣ ಸಂದಾಯವಾಗುತ್ತಿತ್ತು, ಇದು ಗಮನಕ್ಕೆ ಬಂದ ಮೇಲೆ ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದೆ. ಮೃತಪಟ್ಟವರ ಅಕೌಂಟ್​​ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್​ವೇರ್​​​ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಹೀಗಾಗಿ ಅದನ್ನು ಸದ್ಯಕ್ಕೆ ತಡೆಹಿಡಿದಿದ್ದೇವೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್​​ಗೆ ಸೂಚನೆ ಕೊಟ್ಟಿದ್ದೇವೆ. ಮುಖ್ಯ ಕಾರ್ಯದರ್ಶಿಗಳು ಬ್ಯಾಂಕ್​​ಗೆ ಪತ್ರ ಬರೆದಿದ್ದಾರೆ ಎಂದು ಸಚಿವೆ ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ

ಬೆಳಗಾವಿ ಜಿಲ್ಲಾ ವಿಭಜನೆ ಕೂಗಿನ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ, ಸಿಎಂ ಮನಸ್ಸಿನಲ್ಲಿ ಜಿಲ್ಲೆ ವಿಭಜನೆ ಮಾಡಬೇಕು ಅನ್ನೋದು ಇದೆ. ಆಡಳಿತಾತ್ಮಕ, ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಬೆಳಗಾವಿ ತಾಲೂಕಿನಲ್ಲಿ ಹನ್ನೊಂದೂವರೆ ಲಕ್ಷ ಜನಸಂಖ್ಯೆ ಇದೆ. ಇಷ್ಟು ಜನಸಂಖ್ಯೆಗೆ ಒಬ್ಬ ತಹಶೀಲ್ದಾರ್​ ಬಹಳ ತೊಂದರೆ ಆಗುತ್ತದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ. ಜಿಲ್ಲೆ ವಿಭಜನೆ ಘೋಷಣೆ ಮಾಡುವ ಮನಸ್ಸಿನಿಂದಲೇ ಸಿಎಂ ಬಂದಿದ್ದರು. ಬಹಳಷ್ಟು ಜನರು ನಿಯೋಗ ಬಂದಿದ್ದರಿಂದ ಚಿಂತನೆ ಮಾಡಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.26ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ. ಹೆಚ್ಚಳ!

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!

Pakistan: 17 ವರ್ಷ ಜೈಲು ಶಿಕ್ಷೆ ಹಿನ್ನೆಲೆ, ದೇಶಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಸಜ್ಜಾಗಿ, ಇಮ್ರಾನ್ ಖಾನ್ ಕರೆ!

ಬೆಂಗಳೂರು: ರಾಷ್ಟ್ರೀಯ 'ಪಲ್ಸ್ ಪೋಲಿಯೊ ಲಸಿಕಾ' ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

SCROLL FOR NEXT