ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿಗಳ ನೇಮಕ, 5,800 ಹೊಸ ಬಸ್ ಖರೀದಿ: ಸಚಿವ ರಾಮಲಿಂಗಾ ರೆಡ್ಡಿ

10,000 ನೇಮಕಾತಿಗಳಲ್ಲಿ 9,000 ನೇರ ನೇಮಕಾತಿಗಳು ಆಗಿದ್ದು, ಉಳಿದ 1,000 ನೇಮಕಾತಿಗಳು ಅನುಕಂಪದ ಆಧಾರದ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯಪುರ: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯಲ್ಲಿ ಸುಮಾರು 10,000 ಸಿಬ್ಬಂದಿಯನ್ನು ನೇಮಕ ಮಾಡಿದ್ದು, 5,800 ಹೊಸ ಬಸ್‌ಗಳನ್ನು ಖರೀದಿ ಮಾಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ ಹೇಳಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ 142 ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಬಳಿಕ ಸಚಿವರು ಮಾತನಾಡಿದರು.

10,000 ನೇಮಕಾತಿಗಳಲ್ಲಿ 9,000 ನೇರ ನೇಮಕಾತಿಗಳು ಆಗಿದ್ದು, ಉಳಿದ 1,000 ನೇಮಕಾತಿಗಳು ಅನುಕಂಪದ ಆಧಾರದ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಸರ ಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ರಾಜ್ಯ ಸರ್ಕಾರವು 225 ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲು ನಿರ್ಧರಿಸಿದ್ದು, ಇದರಲ್ಲಿ ಕಲಬುರಗಿಗೆ 100, ವಿಜಯಪುರಕ್ಕೆ 25 ಮತ್ತು ಬಳ್ಳಾರಿಗೆ 50 ಬಸ್‌ಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಇದಲ್ಲದೆ, ಸರ್ಕಾರವು 56 ಹೊಸ ಬಸ್‌ಗಳ ಖರೀದಿಗೆ ಆದೇಶ ನೀಡಿದ್ದು, ಇದರಲ್ಲಿ 20 ನಾನ್-ಎಸಿ ಸ್ಲೀಪರ್, 20 ಎಸಿ ಸ್ಲೀಪರ್ ಹಾಗೂ 16 ಎಸಿ ಸೀಟರ್ ಬಸ್‌ಗಳು ಸೇರಿವೆ. ಇದರ ಜೊತೆಗೆ, 400 ಸಾಮಾನ್ಯ ಬಸ್‌ಗಳ ಖರೀದಿಗೆ ಟೆಂಡರ್ ಈಗಾಗಲೇ ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ 2026–27ನೇ ಹಣಕಾಸು ವರ್ಷದಲ್ಲಿ ಇನ್ನೂ 700 ಹೊಸ ಬಸ್‌ಗಳನ್ನು ಖರೀದಿಸುವ ಯೋಜನೆ ಇದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಿಬ್ಬಂದಿ ನೇಮಕಾತಿಯಷ್ಟೇ ಅಲ್ಲದೆ ಹೊಸ ಬಸ್‌ಗಳ ಸೇರ್ಪಡೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಬಳಿಕ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ವೇತನ ಹೆಚ್ಚಳ ಕುರಿತು ಮಾತನಾಡಿದ ಸಚಿವರು, ಅಂತಿಮ ತೀರ್ಮಾನಕ್ಕೂ ಮೊದಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

Dr Sreeleela: ನಟನೆ ಜೊತೆಗೇ MBBS ಪದವಿ ಪಡೆದ ಶ್ರೀಲೀಲಾ, ಪೋಷಕರ ತಬ್ಬಿ ಆನಂದ ಭಾಷ್ಮ! Video

Pakadua Vivah: ಯುವಕನಿಗೆ ಮತ್ತಿನ ಪದಾರ್ಥ ನೀಡಿ ಬಲವಂತದ ಮದುವೆ: Video Viral

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ!

SCROLL FOR NEXT