ಹೆಬ್ಬಾಳ ಮೇಲ್ಸೇತುವೆ 
ರಾಜ್ಯ

ವಾಹನ ಸವಾರರಿಗೆ ಗುಡ್‌ನ್ಯೂಸ್‌: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ

ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್‌ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ಅನುಕೂಲ ಆಗಿದೆ‌

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎರಡನೇ ಲೂಪ್‌ನ ಕೆಲಸವನ್ನು ಪೂರ್ಣಗೊಳಿಸಿ ಪ್ರಾಯೋಗಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸುವುದರಿಂದ ಜನದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ

ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್‌ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ಅನುಕೂಲ ಆಗಿದೆ‌. ಹೊಸ ಲೂಪ್ ರ‍್ಯಾಂಪ್‌ ಓಪನ್‌ಗೆ ವಾಹನ ಸವಾರರು ಖುಷಿಯಾಗಿದ್ದಾರೆ.

ಹೆಬ್ಬಾಳ ಮೇಲ್ಸೆತುವೆಯ ಮತ್ತೊಂದು ಹೊಸ ಲೂಪ್‌ ರ‍್ಯಾಂಪ್‌ ಸಂಚಾರಕ್ಕೆ ಮುಕ್ತ ಆಗಿದೆ. ಎಸ್ಟಿಮ್ ಮಾಲ್ ಮತ್ತು ತುಮಕೂರು ರಸ್ತೆ ವಾಹನ ಸವಾರರು ಮೇಖ್ರಿ ಸರ್ಕಲ್ ಪ್ರವೇಶಕ್ಕೆ ತುಂಬಾ ಅನುಕೂಲಕರ ಮತ್ತು ಯಲಹಂಕ, ಜಕ್ಕೂರು, ಸಹಕಾರನಗರದಿಂದ ನಗರದ ಪ್ರವೇಶಕ್ಕೆ ತುಂಬಾ ಅನುಕೂಲ ಈ ಹೊಸ ಲೂಪ್ ರ‍್ಯಾಂಪ್‌.

ಕಳೆದ ಆಗಸ್ಟ್ ನಲ್ಲಿ ಕೆ.ಆರ್ ಪುರಂನಿಂದ ಮೇಖ್ರಿ ಸರ್ಕಲ್ ಕಡೆಗೆ ಲೂಪ್ ರ‍್ಯಾಂಪ್‌ ಓಪ‌ನ್ ಆಗಿತ್ತು. ಇನ್ನೊಂದು ಮೂರು ದಿನಗಳಲ್ಲಿ ಹೊಸ ರ‍್ಯಾಂಪ್‌‌ಗೂ, ವಿಮಾನ ನಿಲ್ದಾಣದಿಂದ ಬರುವ ವಾಹನಗಳ ಹಳೆಯ ಫ್ಲೈಓವರ್‌ಗೂ ನಡುವೆ ಬೇರ್ಪಡಿಸುವ ಬ್ಯಾರಿಕೇಡ್ ನಿರ್ಮಾಣವಾಗಲಿದೆ.

ಇದರಿಂದ ಸಂಚಾರ ಸುಗಮವಾಗಲಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಡಿಮೆಯಾಗಲಿದೆ. ಈ ಹೊಸ ರ‍್ಯಾಂಪ್‌‌ನಿಂದ ಯಲಹಂಕ, ಜಕ್ಕೂರು, ಸಂಜಯನಗರ, ಕೆಂಪಾಪುರ ಕಡೆಯಿಂದ ಬರುವ ವಾಹನ ಸವಾರರಿಗೆ ಅನುಕೂಲವಾಗಲಿದೆ. ಮೊದಲ ಹಂತದ ರ‍್ಯಾಂಪ್‌ ಉದ್ಘಾಟನೆ ಬಳಿಕ ಹೆಬ್ಬಾಳ ಜಂಕ್ಷನ್‌ನಲ್ಲಿ ಟ್ರಾಫಿಕ್ ಶೇ. 25-30 ಕಡಿಮೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

ಟಿ20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್, ದಾಖಲೆಗಳ ಮಳೆ, ಎಲೈಟ್ ಗ್ರೂಪ್ ಸೇರಿದ Ishan Kishan!

News wrap 12-02-2026| ನಾನು ರಾಜಕಾರಣ ಮಾಡೋಕೇ ದಿಲ್ಲಿಗೆ ಬಂದಿರೋದು- DKS; ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್; ಶಾಸಕ ಆರಗ ಜ್ಞಾನೇಂದ್ರ PA ಬಂಧನ

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

SCROLL FOR NEXT