ಮಾನ್ಯ - ಆಕೆಯ ತಂದೆ 
ರಾಜ್ಯ

ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ತಂದೆ; ಮೂವರ ಬಂಧನ

ಪೈಪ್ ಮತ್ತು ಕೃಷಿ ಉಪಕರಣಗಳನ್ನು ಬಳಸಿ ಹಲ್ಲೆ ನಡೆಸಲಾಗಿದ್ದು, ಸುಮಾರು 20 ವರ್ಷ ವಯಸ್ಸಿನ ಮಹಿಳೆ ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೋಪಗೊಂಡು ತನ್ನ ಮಗಳ ಮೇಲೆಯೇ ತಂದೆ ಹಲ್ಲೆ ನಡೆಸಿದ್ದು, ಗರ್ಭಿಣಿಯಾಗಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪೈಪ್ ಮತ್ತು ಕೃಷಿ ಉಪಕರಣಗಳನ್ನು ಬಳಸಿ ಹಲ್ಲೆ ನಡೆಸಲಾಗಿದ್ದು, ಸುಮಾರು 20 ವರ್ಷ ವಯಸ್ಸಿನ ಮಹಿಳೆ ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದರು.

ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನ ಇನಾಂ-ವೀರಾಪುರದಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಮೃತ ಮಹಿಳೆ ಮೇ ತಿಂಗಳಲ್ಲಿ ತನ್ನ ಕುಟುಂಬದ ವಿರೋಧದ ಹೊರತಾಗಿಯೂ, ತನ್ನ ಗ್ರಾಮದ ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದರು ಮತ್ತು ದಂಪತಿ ಜೀವ ಭಯದಿಂದ ಹಾವೇರಿಯಲ್ಲಿ ವಾಸಿಸುತ್ತಿದ್ದರು. ಅವರು ಈ ತಿಂಗಳ ಆರಂಭದಲ್ಲಿ ಗ್ರಾಮಕ್ಕೆ ಮರಳಿದ್ದರು.

ಭಾನುವಾರ ಮಹಿಳೆಯ ಕುಟುಂಬ ಸದಸ್ಯರು ಆಕೆಯ ಪತಿ ಮತ್ತು ಮಾವ ತಮ್ಮ ಕೃಷಿ ಭೂಮಿಯಲ್ಲಿದ್ದಾಗ ಅವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ಪರಾರಿಯಾಗಿದ್ದಾರೆ. ನಂತರ ಸಂತ್ರಸ್ತೆಯ ಮನೆಗೆ ನುಗ್ಗಿ ಆಕೆಯ ಮೇಲೆ, ಮತ್ತೊಬ್ಬ ಮಹಿಳೆ ಮತ್ತು ಅಲ್ಲಿದ್ದ ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಆರು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಅಲ್ಲಿ ಕೊನೆಯುಸಿರೆಳೆದಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್