ಶಾಸಕ ಭೈರತಿ ಬಸವರಾಜ್ 
ರಾಜ್ಯ

ರೌಡಿಶೀಟರ್ ಕೊಲೆ ಪ್ರಕರಣ: ಬಿಜೆಪಿ ಶಾಸಕನಿಗೆ ಬಿಗ್ ಶಾಕ್; ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಪ್ರಸ್ತುತ ತಲೆ ಮರೆಸಿಕೊಂಡಿರುವ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಮಂಗಳವಾರ ಕೋರ್ಟ್ ವಜಾಗೊಳಿಸಿದೆ.

ಪ್ರಸ್ತುತ ತಲೆ ಮರೆಸಿಕೊಂಡಿರುವ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಭೈರತಿ ಬಸವರಾಜ್‌ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧಿಸಬಹುದು.

ಭೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ರೆ, ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ವಾದ ಮಂಡಿಸಿದರು.

ಈಗಾಗಲೇ ಕೋರ್ಟ್​​ಗೆ ಚಾರ್ಜ್​ಶೀಟ್​ ಪ್ರತಿ ಸಲ್ಲಿಕೆ ಮಾಡಿದ್ದು, ಚಾರ್ಜ್​ಶೀಟ್​ನ ಪೇಜ್ ನಂ.298ರಲ್ಲಿ ಟವರ್ ಲೊಕೇಷನ್ ನಮೂದಿಸಿದೆ. ಎ1 ಮತ್ತು ಎ 5 ನಡುವೆ ದೂರವಾಣಿ ಮಾತುಕತೆ ಇರುವ ದಾಖಲೆಯಿದೆ. ಬಂಧಿಸಿ ವಿಚಾರಣೆಗೆ ಒಳಪಡಿಸಿದ ನಂತರ ಹೆಚ್ಚಿನ ಮಾಹಿತಿ ತಿಳಿಯಲಿದೆ. ಹೀಗಾಗಿ ಜಾಮೀನು ನೀಡದಂತೆ ಎಸ್ಎಸ್ ಪಿ ಅಶೋಕ್ ನಾಯ್ಕ್​ ಅವರು ವಾದಿಸಿದರು.

ಇದಕ್ಕೆ ಪ್ರತಿಯಾಗಿ ಭೈರತಿ ಬಸವರಾಜ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು, ತಮ್ಮ ಕಕ್ಷಿದಾರರು ಕೊಲೆಯಲ್ಲಿ ಭಾಗಿಯಾಗಿರುವುದಕ್ಕೆ ಇದುವರೆಗೂ ಯಾವುದೇ ಸಾಕ್ಷ್ಯಗಳು ಲಭ್ಯವಿಲ್ಲ. 5 ತಿಂಗಳಾದರೂ ಇವರಿಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಎ1 ಜಗ್ಗ, ಎ 5 ಭೈರತಿ ಬಸವರಾಜ್ ನಡುವಿನ ಸಂಪರ್ಕ ಸಾಬೀತಿಗೆ ಯತ್ನಿಸುತ್ತಿದ್ದಾರೆ ಎಂದರು.

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!