ಡಿ.ಕೆ. ಶಿವಕುಮಾರ್ 
ರಾಜ್ಯ

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 TMC ನೀರು ನಿಗದಿ ಮಾಡಲು ಮನವಿ: ಡಿ.ಕೆ ಶಿವಕುಮಾರ್

ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ.

ನವದೆಹಲಿ: ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದ ಅವರು, ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA) ಯನ್ನು ರಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಅದರ ಸದಸ್ಯರಾಗಿರುತ್ತವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಹಾಗೂ ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ ಎಂದರು.

ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ. ನೀರನ್ನು ಯಾವ ಕಡೆ ನೀಡುತ್ತೀರಿ ಹಾಗೂ ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಬೇಡಿಕೆ ಸಭೆಯ ಮುಂದಿಟ್ಟಿದ್ದೇವೆ.

ಬೇಡ್ತಿ ಹಾಗೂ ವರದಾ ನದಿ ಜೋಡಣೆ ನಮ್ಮ ರಾಜ್ಯದೊಳಗೆ ಮಾಡಲಿದ್ದು, 18.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ಇದೆ. ಈ ಎರಡೂ ಯೋಜನೆಗಳಿಂದ ಕರ್ನಾಟಕಕ್ಕೆ ಒಟ್ಟು 34.40 ಟಿಎಂಸಿ ನೀರನ್ನು ನಿಗದಿ ಮಾಡಲಾಗಿದೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆಗೆ ಡಿಪಿಆರ್ ತಯಾರಿಸಲು ನಾವು ಅನುಮತಿಯನ್ನು ನೀಡಿದ್ದೇವೆ. ಇದಕ್ಕೆ 10 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ 90% ಕೇಂದ್ರ ಸರ್ಕಾರ ಹಾಗೂ 10% ರಾಜ್ಯ ಸರ್ಕಾರ ಭರಿಸಲಿದೆ” ಎಂದು ಮಾಹಿತಿ ನೀಡಿದರು.

ಸುಪ್ರೀಂ ಕೋರ್ಟ್ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎರಡು ತಿಂಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವರ ಬಳಿ ತಿಳಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇನೆ.

ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರ ಸಂಬಂಧ ಈಗಾಗಲೇ ಎರಡು ಬಾರಿ ಸಭೆ ಮುಂದೂಡಲ್ಪಟ್ಟಿದೆ. ಮಹದಾಯಿ ವಿಚಾರವಾಗಿ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಯೋಜನೆ ವಿಚಾರದಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹಾಕುವಂತೆ ಕೇಳಿದ್ದೇವೆ” ಎಂದರು.

“ಕೇಂದ್ರ ಸಚಿವರು ನನಗೆ ಮತ್ತೊಂದು ದಿನ ಭೇಟಿಗೆ ಸಮಯಾವಕಾಶ ನೀಡುತ್ತೇನೆ. ಜಲ ಜೀವನ್ ಮಿಷನ್ ಯೋಜನೆಯಿಂದ ಹಿಡಿದು ಕರ್ನಾಟಕಕ್ಕೆ ಸಂಬಂಧಿಸಿದ ಎಲ್ಲಾ ವಿಚಾರವಾಗಿ ಚರ್ಚೆ ಮಾಡಲು ತಿಳಿಸಿದ್ದಾರೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮರು ವ್ಯಾಖ್ಯಾನ ವಿವಾದದ ನಡುವೆ ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ 'ಸಂಪೂರ್ಣ ನಿಷೇಧಿಸಿದ' ಕೇಂದ್ರ

ಅತ್ಯಾಚಾರ ಸಂತ್ರಸ್ತೆ ಮೇಲೆ ಪೊಲೀಸರಿಂದ ದೌರ್ಜನ್ಯ: ‘ಸತ್ತ ಆರ್ಥಿಕತೆ ಮಾತ್ರವಲ್ಲ, ಸತ್ತ ಸಮಾಜದತ್ತ ಸಾಗುತ್ತಿದ್ದೇವೆ’

Vijay Hazare Trophy: 169 ಎಸೆತಗಳಲ್ಲಿ 212 ರನ್ ಚಚ್ಚಿದ Swastik Samal ಐತಿಹಾಸಿಕ ದಾಖಲೆ, ಸಂಜು ಸ್ಯಾಮ್ಸನ್ ರೆಕಾರ್ಡ್ ಸಮಬಲ

ಸಂಸತ್ತಿನಲ್ಲಿ ಸ್ಮಾರ್ಟ್ ಕನ್ನಡಕ, ಪೆನ್ ಕ್ಯಾಮೆರಾ ಬಳಸಬೇಡಿ: ಸಂಸದರಿಗೆ ಸೂಚನೆ

Vijay Hazare Trophy: 84 ಎಸೆತಗಳಲ್ಲಿ 190 ರನ್ ಚಚ್ಚಿದ ವೈಭವ್ ಸೂರ್ಯವಂಶಿ; 574 ರನ್ ಸಿಡಿಸಿ ಬಿಹಾರ ವಿಶ್ವದಾಖಲೆ!

SCROLL FOR NEXT