ಡಿ.ಕೆ. ಶಿವಕುಮಾರ್ 
ರಾಜ್ಯ

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 TMC ನೀರು ನಿಗದಿ ಮಾಡಲು ಮನವಿ: ಡಿ.ಕೆ ಶಿವಕುಮಾರ್

ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ.

ನವದೆಹಲಿ: ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದ ಅವರು, ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA) ಯನ್ನು ರಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಅದರ ಸದಸ್ಯರಾಗಿರುತ್ತವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಹಾಗೂ ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ ಎಂದರು.

ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ. ನೀರನ್ನು ಯಾವ ಕಡೆ ನೀಡುತ್ತೀರಿ ಹಾಗೂ ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಬೇಡಿಕೆ ಸಭೆಯ ಮುಂದಿಟ್ಟಿದ್ದೇವೆ.

ಬೇಡ್ತಿ ಹಾಗೂ ವರದಾ ನದಿ ಜೋಡಣೆ ನಮ್ಮ ರಾಜ್ಯದೊಳಗೆ ಮಾಡಲಿದ್ದು, 18.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ಇದೆ. ಈ ಎರಡೂ ಯೋಜನೆಗಳಿಂದ ಕರ್ನಾಟಕಕ್ಕೆ ಒಟ್ಟು 34.40 ಟಿಎಂಸಿ ನೀರನ್ನು ನಿಗದಿ ಮಾಡಲಾಗಿದೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆಗೆ ಡಿಪಿಆರ್ ತಯಾರಿಸಲು ನಾವು ಅನುಮತಿಯನ್ನು ನೀಡಿದ್ದೇವೆ. ಇದಕ್ಕೆ 10 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ 90% ಕೇಂದ್ರ ಸರ್ಕಾರ ಹಾಗೂ 10% ರಾಜ್ಯ ಸರ್ಕಾರ ಭರಿಸಲಿದೆ” ಎಂದು ಮಾಹಿತಿ ನೀಡಿದರು.

ಸುಪ್ರೀಂ ಕೋರ್ಟ್ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎರಡು ತಿಂಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವರ ಬಳಿ ತಿಳಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇನೆ.

ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರ ಸಂಬಂಧ ಈಗಾಗಲೇ ಎರಡು ಬಾರಿ ಸಭೆ ಮುಂದೂಡಲ್ಪಟ್ಟಿದೆ. ಮಹದಾಯಿ ವಿಚಾರವಾಗಿ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಯೋಜನೆ ವಿಚಾರದಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹಾಕುವಂತೆ ಕೇಳಿದ್ದೇವೆ” ಎಂದರು.

“ಕೇಂದ್ರ ಸಚಿವರು ನನಗೆ ಮತ್ತೊಂದು ದಿನ ಭೇಟಿಗೆ ಸಮಯಾವಕಾಶ ನೀಡುತ್ತೇನೆ. ಜಲ ಜೀವನ್ ಮಿಷನ್ ಯೋಜನೆಯಿಂದ ಹಿಡಿದು ಕರ್ನಾಟಕಕ್ಕೆ ಸಂಬಂಧಿಸಿದ ಎಲ್ಲಾ ವಿಚಾರವಾಗಿ ಚರ್ಚೆ ಮಾಡಲು ತಿಳಿಸಿದ್ದಾರೆ” ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!