ಈ ವರ್ಷ ನಮ್ಮನಗಲಿದ ಗಣ್ಯರು. 
ರಾಜ್ಯ

ಹಿನ್ನೋಟ 2025: ನಮ್ಮನ್ನಗಲಿದ ಗಣ್ಯರು, ಪ್ರಮುಖರು

ಸಾವು ಎಂತಹ ವ್ಯಕ್ತಿ, ಸಮಾಜವನ್ನೇ ಅಲ್ಲಾಡಿಸಿ ಬಿಡುತ್ತದೆ. ಈ ವರ್ಷವಂತೂ ದೇಶದಲ್ಲಿ ಹಲವು ಗಣ್ಯರು, ಸಾಧಕರು ನಮ್ಮನಗಲಿದ್ದಾರೆ.

ಸಾವು ಎಂತಹ ವ್ಯಕ್ತಿ, ಸಮಾಜವನ್ನೇ ಅಲ್ಲಾಡಿಸಿ ಬಿಡುತ್ತದೆ. ಈ ವರ್ಷವಂತೂ ದೇಶದಲ್ಲಿ ಹಲವು ಗಣ್ಯರು, ಸಾಧಕರು ನಮ್ಮನಗಲಿದ್ದಾರೆ. ರಾಷ್ಟ್ರ ರಾಜಕಾರಣ, ಸಿನಿಮಾ ಹಾಗೂ ಇತರೆ ವಲಯಗಳಲ್ಲಿ ಮೇರು ವ್ಯಕ್ತಿಗಳ ಸಾವು ಸಾಕಷ್ಟು ನೋವು ತಂದಿದೆ. ಈ ವರ್ಷ ಇಹಲೋಕ ತ್ಯಜಿಸಿದವರು ಯಾರು ಎಂಬುದರ ಸಂಕ್ಷಿಪ್ತ ವಿವರ ಇಲ್ಲಿವೆ...

ಬಿ. ಸರೋಜಾ ದೇವಿ

ಬಿ. ಸರೋಜಾ ದೇವಿ

ಕನ್ನಡ ಚಿತ್ರರಂಗದ ದಿಗ್ಗಜ ನಟಿ ಬಿ. ಸರೋಜಾ ದೇವಿ ಅವರು ಜುಲೈ 14ರಂದು ಬೆಂಗಳೂರಿನಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ನಿಧನರಾದರು.

ಎಂ.ಎಸ್. ಉಮೇಶ್

ಎಂ.ಎಸ್. ಉಮೇಶ್

ಆನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಎಂ.ಎಸ್. ಉಮೇಶ್ ಅವರು ನವೆಂಬರ್ 30ರಂದು ಬೆಂಗಳೂರಿನಲ್ಲಿ ನಿಧನರಾದರು.

ಹರೀಶ್​ ರಾಯ್

ಹರೀಶ್​ ರಾಯ್

ಬ್ಲಾಕ್​​​​ಬಸ್ಟರ್​ 'ಕೆಜಿಎಫ್'​ ಮೂಲಕ 'ಕೆಜಿಎಫ್​​​ ಚಾಚಾ' ಎಂದೇ ಜನಪ್ರಿಯರಾಗಿದ್ದ ನಟ ಹರೀಶ್​ ರಾಯ್ 4ನೇ ಹಂತದ ಥೈರಾಯ್ಡ್ ಕ್ಯಾನ್ಸರ್ ವಿರುದ್ಧ ಹೋರಾಡಿ ಬೆಂಗಳೂರಿನಲ್ಲಿ ನಿಧನರಾದರು. ಹರೀಶ್ ರಾಯ್ ಅವರಿಗೆ 55 ವರ್ಷ ವಯಸ್ಸಾಗಿತ್ತು.

ರಾಜು ತಾಳಿಕೋಟೆ

ರಾಜು ತಾಳಿಕೋಟೆ

ಖ್ಯಾತ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಅಕ್ಟೋಬರ್ 13ರಂದು ತಮ್ಮ 62ನೇ ವಯಸ್ಸಿನಲ್ಲಿ ನಿಧನರಾದರು.

ಯಶವಂತ ಸರದೇಶಪಾಂಡೆ

ಯಶವಂತ ಸರದೇಶಪಾಂಡೆ

ರಂಗಭೂಮಿ ಕಲಾವಿದ, ಸೂಪರ್​ ಹಿಟ್ 'ರಾಮ ಶಾಮ ಭಾಮ‌' ಸಿನಿಮಾ ಖ್ಯಾತಿಯ ಹಾಸ್ಯ ನಟ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ಸೆಪ್ಟಂಬರ್​​ 29ರಂದು ಕೊನೆಯುಸಿರೆಳೆದರು.

ಬ್ಯಾಂಕ್ ಜನಾರ್ಧನ್

ಬ್ಯಾಂಕ್ ಜನಾರ್ಧನ್

ವಯೋಸಹಜ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು, ಏಪ್ರಿಲ್ 14ರಂದು ತಮ್ಮ 75ನೇ ವಯಸ್ಸಿನಲ್ಲಿ ನಿಧನರಾದರು.

ರಾಕೇಶ್ ಪೂಜಾರಿ

ರಾಕೇಶ್ ಪೂಜಾರಿ

ಜನಪ್ರಿಯ ಕನ್ನಡ, ತುಳು ನಟ ಮತ್ತು ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿಜೇತ ರಾಕೇಶ್ ಪೂಜಾರಿ, ಮೇ 11ರಂದು ತಮ್ಮ 34ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಗಡ್ಡಪ್ಪ

ಗಡ್ಡಪ್ಪ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್​ ಚನ್ನೇಗೌಡ ಅವರು ನವೆಂಬರ್​ 12ರಂದು ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಶ್ರೀಧರ್‌ ನಾಯಕ್‌

ಶ್ರೀಧರ್‌ ನಾಯಕ್‌

'ಪಾರು' ಸೀರಿಯಲ್ ಖ್ಯಾತಿಯ ನಟ ಶ್ರೀಧರ್‌ ನಾಯಕ್‌ ಮೇ 26ರಂದು ನಿಧನರಾದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸರಿಗಮ ವಿಜಿ

ಸರಿಗಮ ವಿಜಿ

ಕನ್ನಡದ ಹಿರಿಯ ನಟ ಮತ್ತು ರಂಗಭೂಮಿ ಕಲಾವಿದ ಸರಿಗಮ ವಿಜಿ ಅವರು ಜನವರಿ 15ರಂದು ತಮ್ಮ 76ನೇ ವಯಸ್ಸಿನಲ್ಲಿ ನಿಧನರಾದರು.

ಮುರಳಿ ಮೋಹನ್

ಮುರಳಿ ಮೋಹನ್

ಶಿವರಾಜ್​ಕುಮಾರ್, ರವಿಚಂದ್ರನ್ ಹಾಗೂ ಉಪೇಂದ್ರ ಅವರಂತಹ ಸ್ಟಾರ್ ನಟರ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಮುರಳಿ ಮೋಹನ್ ಆಗಸ್ಟ್​ 13ರಂದು ನಿಧನರಾದರು.

ದಿನೇಶ್ ಮಂಗಳೂರು

ದಿನೇಶ್ ಮಂಗಳೂರು

ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಆಗಸ್ಟ್ 25ರಂದು ಕುಂದಾಪುರದ ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಶಿಲ್ಪಿ ರಾಮ್ ಸುತಾರ್

ಶಿಲ್ಪಿ ರಾಮ್ ಸುತಾರ್

ಗುಜರಾತ್‌ನಲ್ಲಿನ ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ಡಿ.17ರಂದು ವಿಧಿವಶರಾಗಿದ್ದರು.ಅವರಿಗೆ 100ವರ್ಷ ವಯಸ್ಸಾಗಿತ್ತು.

ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್​​​ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಸಾಲುಮರದ ತಿಮ್ಮಕ್ಕ

ಸಾಲುಮರದ ತಿಮ್ಮಕ್ಕ

ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಸಾಲು ಮರದ ತಿಮ್ಮಕ್ಕ ನ.14 ರಂದು ನಿಧನರಾಗಿದ್ದರು. ಅವರಿಗೆ 114 ವರ್ಷ ವಯಸ್ಸಾಗಿತ್ತು.

ಎಸ್.ಎಲ್. ಭೈರಪ್ಪ

ಎಸ್.ಎಲ್. ಭೈರಪ್ಪ

ಹಿರಿಯ ಸಾಹಿತಿ, ಕಾದಂಬರಿಕಾರ ಎಸ್.ಎಲ್. ಭೈರಪ್ಪನವರು ಸೆ. 24ರಂದು ನಿಧನರಾಗಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಧರ್ಮೇಂದ್ರ

ಧರ್ಮೇಂದ್ರ

ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ಅವರು ನವೆಂಬರ್‌ 24ರಂದು ನಿಧನರಾದರು, ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು.

ಶೆಫಾಲಿ ಜರಿವಾಲಾ

ಶೆಫಾಲಿ ಜರಿವಾಲಾ

ಬಾಲಿವುಡ್‌ ನಟಿ, ʻಹುಡುಗರುʼ ಸಿನಿಮಾದಲ್ಲಿ ʻಪಂಕಜಾʼ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ 42 ವರ್ಷ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು.

ಸಂಜಯ್ ಕಪೂರ್

ಸಂಜಯ್ ಕಪೂರ್

ಕೈಗಾರಿಕಾ ಉದ್ಯಮಿ ಮತ್ತು ಕರಿಷ್ಮಾ ಕಪೂರ್ ಅವರ ಮಾಜಿ ಪತಿ ಸಂಜಯ್ ಕಪೂರ್ 2025ರ ಜೂನ್ 12ರಂದು ಲಂಡನ್‌ನಲ್ಲಿ ಗಾಲ್ಫ್ ಆಡುತ್ತಿರುವಾಗ 53ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಹಠಾತ್ತನೆ ನಿಧನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಬೆಂಗಳೂರು, ಕೊಡಗು ಸೇರಿ 10 ಕಡೆ ದಾಳಿ!

ಸಾ** ಹೇಳಿಕೆ: 'ಉದ್ದೇಶ ಒಳ್ಳೆಯದೇ ಆಗಿತ್ತು.. ವಿವಾದ ಬೇಕಿರಲಿಲ್ಲ..': ಕೊನೆಗೂ ಕ್ಷಮೆ ಕೋರಿದ ನಟ ಶಿವಾಜಿ!

ಚಿಕ್ಕಬಳ್ಳಾಪುರ ಬೆಳ್ಳಿ ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು, ಚಿನ್ನಕ್ಕೂ ಸ್ಕೆಚ್ ಹಾಕಿದ್ದರು!

ದೆಹಲಿಯಲ್ಲಿ 2 ದಿನ ಇದ್ದಿದ್ದಕ್ಕೆ ಸೋಂಕು ತಗುಲಿದೆ: ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ? ನಿತಿನ್ ಗಡ್ಕರಿ

SCROLL FOR NEXT