ಸಂಗ್ರಹ ಚಿತ್ರ 
ರಾಜ್ಯ

ಯಲಹಂಕ ಅತ್ಯಾಚಾರ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳ ಬಂಧನ

ಪ್ರಮುಖ ಆರೋಪಿ ಅಪ್ರಾಪ್ತ ಬಾಲಕನಾಗಿದ್ದಾನೆ. ಈತ ವಿದ್ಯಾರ್ಥಿನಿಯ ಸ್ನೇಹಿತನಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಉಳಿದ ಇಬ್ಬರು ಕೃತ್ಯಕ್ಕೆ ಸಹಕಾರ ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಯಲಹಂಕದಲ್ಲಿನ ಲಾಡ್ಜ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ದೇವನಹಳ್ಳಿ ನಿವಾಸಿಗಳಾದ ಜೀವನ್ (21) ಮತ್ತು ಚೇತನ್ (26) ಎಂದು ಗುರುತಿಸಲಾಗಿದೆ. 17 ವರ್ಷದ ಅಪ್ರಾಪ್ತ ಬಾಲಕ ಪ್ರಕರಣದ ಪ್ರಮುಖ ಆರೋಪಿಗಳಾಗದ್ದು, ಬಾಲಕನನ್ನು ಬಾಲ ನ್ಯಾಯ ಮಂಡಳಿ (ಜುವೆನೈಲ್ ಜಸ್ಟಿಸ್ ಬೋರ್ಡ್) ಮುಂದೆ ಹಾಜರುಪಡಿಸಲಾಗಿದೆ.

ಪ್ರಮುಖ ಆರೋಪಿ ಅಪ್ರಾಪ್ತ ಬಾಲಕನಾಗಿದ್ದಾನೆ. ಈತ ವಿದ್ಯಾರ್ಥಿನಿಯ ಸ್ನೇಹಿತನಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಉಳಿದ ಇಬ್ಬರು ಕೃತ್ಯಕ್ಕೆ ಸಹಕಾರ ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪ್ರಾಪ್ತ ಬಾಲಕ ಮತ್ತು ಸಂತ್ರಸ್ತೆ ಆರು ತಿಂಗಳ ಹಿಂದೆ ಕಾಲೇಜಿನ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿಕೊಂಡಿದ್ದರು. ಗುರುವಾರ ರಾತ್ರಿ ಬಾಲಕ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಯಲಹಂಕದಲ್ಲಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ಅಲ್ಲಿ ಆಕೆಗೆ ಬಲವಂತದಿಂದ ಮದ್ಯಪಾನಕ್ಕೆ ಮಾಡಿದ್ದು, ನಂತರ ಆಕೆಯ ಮೇಲೆ ಬಾಲಕ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ವಿದ್ಯಾರ್ಥಿನಿ ಮನೆಗೆ ಹಿಂದಿರುಗದೇ ಇದ್ದ ಕಾರಣ, ಆಕೆಯ ಪೋಷಕರು ಆತಂಕ್ಕೊಳಗಾಗಿದ್ದಾರೆ. ಮೊಬೈಲ್ ಫೋನ್ ಸ್ವಿಚ್ ಆಫ್ ಬಂದಿದ್ದು, ನಂತರ ಯಲಹಂಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao rape case: ಆರೋಪಿಗೆ ಜಾಮೀನು ವಿರೋಧಿಸಿ ಪ್ರತಿಭಟನೆ, ಸಂತ್ರಸ್ತೆ ತಾಯಿ ಪೊಲೀಸರ ಮೇಲೆ ಹಲ್ಲೆ, ಸುದ್ದಿಗೋಷ್ಠಿಗೂ ತಡೆ! Video

ಬಾಂಗ್ಲಾದೇಶದಲ್ಲಿ ಹಿಂದೂಗಳ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಪ್ರತಿಭಟನೆ; ಭುಗಿಲೆದ್ದ ಹಿಂಸಾಚಾರ

'ಕಿಚ್ಚನ ಕದನ ವಿರಾಮ?': ಕೊನೆಗೂ ನಟ ದರ್ಶನ್ ಕುರಿತು ಸುದೀಪ್ ಮಾತು! ಹೇಳಿದ್ದೇನು?

ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

SCROLL FOR NEXT