ಮಹೇಶ್ವರಾನಂದ ಸ್ವಾಮೀಜಿ 
ರಾಜ್ಯ

ಬಾಗಲಕೋಟೆ: ಚುನಾವಣೆಯಲ್ಲಿ ಮುಸ್ಲಿಮರನ್ನು ಬೇಕಂತಲೆ ಸೋಲಿಸ್ತಾರೆ; 1 ಕೋಟಿ ಜನಸಂಖ್ಯೆಗೆ 10 MLA ಸಾಕಾ?; ಮಹೇಶ್ವರಾನಂದ ಸ್ವಾಮೀಜಿ

ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ ಎಂದರು.

ಬಾಗಲಕೋಟೆ: ಮುಸ್ಲಿಮರನ್ನು ಚುನಾವಣೆಯಲ್ಲಿ ಸೋಲುವುದಿಲ್ಲ ಅವರನ್ನು ಸೋಲಿಸಲಾಗುತ್ತದೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ ಅಷ್ಟೇ ಸಾಕಾ? ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ ಎಂದು ಬಾಗಲಕೋಟೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಕರ್ನಾಟಕದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನರಿದ್ದರೂ ಆ ಸಮುದಾಯದ 59 ಮಂದಿ ಶಾಸಕರಿದ್ದಾರೆ. ಒಕ್ಕಲಿಗರ ಸಂಖ್ಯೆ 60 ಲಕ್ಷ ಇದ್ದರೂ 46 ಜನ ಎಂಎಲ್​​ಎಗಳಿದ್ದಾರೆ. 15 ಲಕ್ಷ ಇರುವ ಬ್ರಾಹ್ಮಣ ಸಮುದಾಯದ 10 ಶಾಸಕರಿದ್ದಾರೆ. ಆದರೆ 1 ಕೋಟಿ ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದವರಿಗೆ ಚುನಾವಣೆಗಳಲ್ಲಿ ಕೇವಲ 15 ಜನರಿಗೆ ಕಾಂಗ್ರೆಸ್ ಪಕ್ಷ‌ ಟಿಕೆಟ್ ಕೊಡುತ್ತೆ. ಅದರಲ್ಲಿ 9 ಮಂದಿ ಗೆಲ್ಲುತ್ತಾರೆ 6 ಜನ ಸೋಲುತ್ತಾರೆ. ಆದರೆ ಮುಂದಿನ ಬಾರಿ ಮುಸ್ಲಿಂ ಸಮುದಾಯದ 30 ಜನ ಶಾಸಕರಾಗಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೇ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ

ಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ಪರಿಹಾರ!