ಮಹೇಶ್ವರಾನಂದ ಸ್ವಾಮೀಜಿ 
ರಾಜ್ಯ

ಬಾಗಲಕೋಟೆ: ಚುನಾವಣೆಯಲ್ಲಿ ಮುಸ್ಲಿಮರನ್ನು ಬೇಕಂತಲೆ ಸೋಲಿಸ್ತಾರೆ; 1 ಕೋಟಿ ಜನಸಂಖ್ಯೆಗೆ 10 MLA ಸಾಕಾ?: ಮಹೇಶ್ವರಾನಂದ ಸ್ವಾಮೀಜಿ

ಮುಸ್ಲಿಮರನ್ನು ಚುನಾವಣೆಯಲ್ಲಿ ಸೋಲುವುದಿಲ್ಲ ಅವರನ್ನು ಸೋಲಿಸಲಾಗುತ್ತದೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ ಅಷ್ಟೇ ಸಾಕಾ? ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ ಎಂದರು.

ಬಾಗಲಕೋಟೆ: ಮುಸ್ಲಿಮರನ್ನು ಚುನಾವಣೆಯಲ್ಲಿ ಸೋಲುವುದಿಲ್ಲ ಅವರನ್ನು ಸೋಲಿಸಲಾಗುತ್ತದೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ ಅಷ್ಟೇ ಸಾಕಾ? ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ ಎಂದು ಬಾಗಲಕೋಟೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಕರ್ನಾಟಕದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನರಿದ್ದರೂ ಆ ಸಮುದಾಯದ 59 ಮಂದಿ ಶಾಸಕರಿದ್ದಾರೆ. ಒಕ್ಕಲಿಗರ ಸಂಖ್ಯೆ 60 ಲಕ್ಷ ಇದ್ದರೂ 46 ಜನ ಎಂಎಲ್​​ಎಗಳಿದ್ದಾರೆ. 15 ಲಕ್ಷ ಇರುವ ಬ್ರಾಹ್ಮಣ ಸಮುದಾಯದ 10 ಶಾಸಕರಿದ್ದಾರೆ. ಆದರೆ 1 ಕೋಟಿ ಜನಸಂಖ್ಯೆ ಇರುವ ಮುಸ್ಲಿಂ ಸಮುದಾಯದವರಿಗೆ ಚುನಾವಣೆಗಳಲ್ಲಿ ಕೇವಲ 15 ಜನರಿಗೆ ಕಾಂಗ್ರೆಸ್ ಪಕ್ಷ‌ ಟಿಕೆಟ್ ಕೊಡುತ್ತೆ. ಅದರಲ್ಲಿ 9 ಮಂದಿ ಗೆಲ್ಲುತ್ತಾರೆ 6 ಜನ ಸೋಲುತ್ತಾರೆ. ಆದರೆ ಮುಂದಿನ ಬಾರಿ ಮುಸ್ಲಿಂ ಸಮುದಾಯದ 30 ಜನ ಶಾಸಕರಾಗಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao rape case: ಆರೋಪಿ ಶಿಕ್ಷೆ ಅಮಾನತು ವಿರೋಧಿಸಿ ಪ್ರತಿಭಟನೆ; ಸಂತ್ರಸ್ತೆ ತಾಯಿ ಮೇಲೆ ಪೊಲೀಸರ ಬಲಪ್ರಯೋಗ, ಸುದ್ದಿಗೋಷ್ಠಿಗೂ ತಡೆ! Video

ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಮುಖಭಂಗ, ಬಿಜೆಪಿಗೆ ಬಹುಮತ!

'ಕಿಚ್ಚನ ಕದನ ವಿರಾಮ?': ಕೊನೆಗೂ ನಟ ದರ್ಶನ್ ಕುರಿತು ಸುದೀಪ್ ಮಾತು! ಹೇಳಿದ್ದೇನು?

ಮಾರ್ಚ್ 2026 ರಲ್ಲಿ 'ಧುರಂಧರ್ 2' ಐದು ಭಾಷೆಗಳಲ್ಲಿ ಬಿಡುಗಡೆ

ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!

SCROLL FOR NEXT