ಗುಂಡೇಟಿಗೆ ಬಲಿಯಾಗಿರುವ ಕೃಷ್ಣಮೃಗ 
ರಾಜ್ಯ

ಚಿಕ್ಕಮಗಳೂರು: ಗುಂಡೇಟಿಗೆ ಬಲಿಯಾದ ಮೂರು ಕೃಷ್ಣಮೃಗಗಳು; ಬೇಟೆಗಾರರು ಬಾಗಿಯಾಗಿರುವ ಶಂಕೆ!

ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು: ಇಲ್ಲಿನ ಕಡೂರು ತಾಲ್ಲೂಕಿನಲ್ಲಿ ಮೂರು ಕೃಷ್ಣಮೃಗಗಳು ಶಂಕಿತ ಗುಂಡೇಟಿನಿಂದ ಸಾವಿಗೀಡಾಗಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮಂಗಳವಾರ ಮೂರು ಕೃಷ್ಣಮೃಗಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಗುಂಡೇಟಿನ ಪುರಾವೆಗಳು ಮತ್ತು ಸಮೀಪದಲ್ಲಿ ವಾಹನಗಳು ಸಂಚರಿಸಿರುವ ಗುರುತುಗಳು ಕಂಡುಬಂದಿವೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳ ಪ್ರಕಾರ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಿಗಳನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ.

ಬೇಟೆಗಾರರ ಗುಂಡೇಟಿಗೆ ಕೃಷ್ಣಮೃಗಗಳು ಬಲಿಯಾಗಿರಬಹುದು ಎಂದು ಕೆಲವು ಸ್ಥಳೀಯರು ಮತ್ತು ಪರಿಸರವಾದಿಗಳಿಂದ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao rape case: ಆರೋಪಿಗೆ ಜಾಮೀನು ವಿರೋಧಿಸಿ ಪ್ರತಿಭಟನೆ, ಸಂತ್ರಸ್ತೆ ತಾಯಿ ಪೊಲೀಸರ ಮೇಲೆ ಹಲ್ಲೆ, ಸುದ್ದಿಗೋಷ್ಠಿಗೂ ತಡೆ! Video

ಬಾಂಗ್ಲಾದೇಶದಲ್ಲಿ ಹಿಂದೂಗಳ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಪ್ರತಿಭಟನೆ; ಭುಗಿಲೆದ್ದ ಹಿಂಸಾಚಾರ

'ಕಿಚ್ಚನ ಕದನ ವಿರಾಮ?': ಕೊನೆಗೂ ನಟ ದರ್ಶನ್ ಕುರಿತು ಸುದೀಪ್ ಮಾತು! ಹೇಳಿದ್ದೇನು?

ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

SCROLL FOR NEXT