ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್  
ರಾಜ್ಯ

E-khata ಕುರಿತ ಎಲ್ಲಾ ಸಮಸ್ಯೆಗಳು ಶೀಘ್ರದಲ್ಲೇ ಪರಿಹಾರ: GBA ಮುಖ್ಯಸ್ಥ ಮಹೇಶ್ವರ್ ರಾವ್

ಸ್ವತ್ತು ಹೊಂದಿರುವವರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಇ-ಖಾತಾ ಯೋಜನೆಯನ್ನು ಪ್ರಾರಂಭಿಸಿದೆ. ಯಾರಿಗೆ ಯಾವುದಾದರೂ ಸಮಸ್ಯೆಗಳು ಎದುರಾದರೂ ಅದನ್ನು ನಾವು ಪರಿಹರಿಸುತ್ತೇವೆ.

ಬೆಂಗಳೂರು: ಸಂಬಂಧಿತ ದಾಖಲೆಗಳನ್ನು ಸಲ್ಲಿಸಿದರೂ ಇ-ಖಾತಾಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಂಗಳವಾರ ಹೇಳಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಪ್ರತಿಕ್ರಿಯೆ ನೀಡಿ, ಇ-ಖಾತಾಗಾಗಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.

ಸ್ವತ್ತು ಹೊಂದಿರುವವರಿಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಇ-ಖಾತಾ ಯೋಜನೆಯನ್ನು ಪ್ರಾರಂಭಿಸಿದೆ. ಯಾರಿಗೆ ಯಾವುದಾದರೂ ಸಮಸ್ಯೆಗಳು ಎದುರಾದರೂ ಅದನ್ನು ನಾವು ಪರಿಹರಿಸುತ್ತೇವೆ ಎಂದು ತಿಳಿಸಿದರು.

ಇ-ಖಾತಾ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂಬ ದೂರು ಕುರಿತು ಮಾತನಾಡಿ, ಇದನ್ನು ಪತ್ತೆ ಮಾಡಲು ಆಡಿಟ್ ನಡೆಸಲಾಗುವುದು ಎಂದರು.

ಏತನ್ಮಧ್ಯೆ, ಇ-ಖಾತಾಗಳನ್ನು ನೀಡುವಲ್ಲಿ ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಬೊಮ್ಮನಹಳ್ಳಿ ವಲಯದ ಉಪ ಆಯುಕ್ತ ಡಿ.ಕೆ. ಬಾಬು ಮತ್ತು ಕಂದಾಯ ಅಧಿಕಾರಿ (ಬಿಟಿಎಂ ಲೇಔಟ್) ವರಲಕ್ಷ್ಮಿ ಅವರನ್ನು ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಜಿಬಿಎ ಪುರಸಭೆ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಕಂದಾಯ ಇಲಾಖೆಯ ನೌಕರರನ್ನು ಆಯುಕ್ತರು ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಕೆಲಸದ ಹೊರೆಯಿಂದಾಗಿ ಅನೇಕ ನೌಕರರು ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿದ್ದಾರೆಂದು ಆರೋಪಿಸಿದರು.

ಇದೇ ವೇಳೆ ಸಂಘದ ಸದಸ್ಯರು ಜಿಬಿಎ ಆಯುಕ್ತರನ್ನು ಭೇಟಿ ಮಾಡಿ ವಿಶೇಷ ಆಯುಕ್ತರ ವಿರುದ್ಧ ದೂರು ನೀಡಿದರು. ಇಬ್ಬರು ಅಧಿಕಾರಿಗಳ ಅಮಾನತು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಧಿಕಾರಿಗಳ ಅಮಾನತು ಆದೇಶ ರದ್ದುಪಡಿಸದಿದ್ದರೆ, ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಬೆಂಗಳೂರು, ಕೊಡಗು ಸೇರಿ 10 ಕಡೆ ದಾಳಿ!

ಸಾ** ಹೇಳಿಕೆ: 'ಉದ್ದೇಶ ಒಳ್ಳೆಯದೇ ಆಗಿತ್ತು.. ವಿವಾದ ಬೇಕಿರಲಿಲ್ಲ..': ಕೊನೆಗೂ ಕ್ಷಮೆ ಕೋರಿದ ನಟ ಶಿವಾಜಿ!

ಚಿಕ್ಕಬಳ್ಳಾಪುರ ಬೆಳ್ಳಿ ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು, ಚಿನ್ನಕ್ಕೂ ಸ್ಕೆಚ್ ಹಾಕಿದ್ದರು!

ದೆಹಲಿಯಲ್ಲಿ 2 ದಿನ ಇದ್ದಿದ್ದಕ್ಕೆ ಸೋಂಕು ತಗುಲಿದೆ: ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ? ನಿತಿನ್ ಗಡ್ಕರಿ

SCROLL FOR NEXT