ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ: CWC ಸಭೆಯಲ್ಲಿ ಭಾಗಿ, ಡಿಕೆಶಿಗೆ ಇಲ್ಲ ಆಹ್ವಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ CWC ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.

ಡಿ.27 ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮೊದಲು ಸಿಡಬ್ಲ್ಯೂಸಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದು ಸಿಎಂ ಹೇಳಿದ್ದರು. ಈಗ ನಾಳೆ ಸಿಎಂ ದೆಹಲಿಗೆ ಹೋಗುವುದು ಅಧಿಕೃತವಾಗಿದೆ.

ಐದು ರಾಜ್ಯಗಳ ಚುನಾವಣೆ, ಮತಕಳ್ಳತನ, ನ್ಯಾಷನಲ್ ಹೆರಾಲ್ಡ್ ಮತ್ತು ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಡಿಕೆಶಿಗೆ ಇಲ್ಲ ಆಹ್ವಾನ

ನಾಡಿದ್ದಿನ ಸಿಡಬ್ಲ್ಯುಸಿ ಸಭೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ-ಖರ್ಗೆ ಭೇಟಿ: ಮತ್ತೆ ಚಾಲ್ತಿಗೆ ಬಂದ ಸಿಎಂ ಬದಲಾವಣೆ ಊಹಾಪೋಹ, ಸಿಡಬ್ಲ್ಯುಸಿ ಸಭೆ ಕುರಿತು ಮಹತ್ವದ ಮಾತು!

'ರಾಷ್ಟ್ರೀಯ ಪ್ರೇರಣಾ ಸ್ಥಳ' ಲೋಕಾರ್ಪಣೆ: ಭಾರತದಲ್ಲಿ ಟೆಲಿಕಾಂ ಕ್ರಾಂತಿಯ ವೇಗ ಹೆಚ್ಚಿಸಿದ ಶ್ರೇಯಸ್ಸು ಅಟಲ್ ಜಿಗೆ ಸಲ್ಲುತ್ತದೆ- ಪ್ರಧಾನಿ ಮೋದಿ

ಚಿತ್ರದುರ್ಗ: ಖಾಸಗಿ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ, ಬೆಂಕಿ​​​​; 9 ಮಂದಿ ಸಜೀವ ದಹನ, ಹಲವರಿಗೆ ಗಂಭೀರ ಗಾಯ; ತನಿಖೆಗೆ ಆದೇಶ; Video

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

'ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು': ದರ್ಶನ್-ಸುದೀಪ್ ಫ್ಯಾನ್ಸ್ ವಾರ್ ಕುರಿತು ಶಿವಣ್ಣ ಖಡಕ್ ಮಾತು!

SCROLL FOR NEXT