ಮೈಸೂರು ಅರಮನೆ ಆವರಣದಲ್ಲಿ ಸಿಲಿಂಡರ್ ಸ್ಫೋಟ 
ರಾಜ್ಯ

ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಪೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.

ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ.

ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್‌ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿದ್ದು, ಇದಕ್ಕಾಗಿ ಅರಮನೆಗೆ ದೀಪಾಲಂಕಾರ ಮಾಡಲಾಗಿತ್ತು.

ಹೀಗಾಗಿ ಪ‍್ರವಾಸಿಗರು ಹೆಚ್ಚಿದ್ದರು. ಹೀಗಾಗಿ ನೈಟ್ರೋಜನ್‌ ಬಲೂನ್‌ ಮಾರುವಾತ ಅಲ್ಲಿಗೆ ಬಂದು ವ್ಯಾಪಾರ ನಡೆಸುತ್ತಿದ್ದ. ಈ ವೇಳೆ ಗ್ಯಾಸ್‌ ಸಿಲಿಂಡರ್‌ ಒಡೆದು ಈ ದುರ್ಘಟನೆ ಸಂಭವಿಸಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ- ಅಮೆರಿಕ ನಡುವಿನ ಸಂಬಂಧ ಹಳ್ಳಹಿಡಿಸಲು ಯತ್ನದ ಆರೋಪ: ಚೀನಾ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: ವರದಿ

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video

40 ಲಕ್ಷ ರೂ ವೆಚ್ಚದ ಅದ್ಧೂರಿ ಮದುವೆ.. ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ! ಆಗಿದ್ದೇನು?

ಜನರಿಂದ 'ಚಪ್ಪಲಿ'ಯಲ್ಲಿ ಹೊಡೆಸ್ತೇನೆ: ಮಾಗಡಿ ತಹಶೀಲ್ದಾರ್ ಗೆ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಆವಾಜ್! ವಿಡಿಯೋ ವೈರಲ್

SCROLL FOR NEXT