ಸಾಂದರ್ಭಿಕ ಚಿತ್ರ 
ರಾಜ್ಯ

40 ಲಕ್ಷ ರೂ ವೆಚ್ಚದ ಅದ್ಧೂರಿ ಮದುವೆ.. ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ! ಆಗಿದ್ದೇನು?

ವಿವಾಹವಾಗಿ ಹನಿಮೂನ್ ಗೆ ಹೋಗಿದ್ದ 26 ವರ್ಷದ ಮಹಿಳೆಯೊಬ್ಬರು ದಿಢೀರ್ ಮನೆಗೆ ವಾಪಸ್ ಆಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್‍ನಲ್ಲಿ ನಡೆದಿದೆ.

ಬೆಂಗಳೂರು: ನವವಿವಾಹಿತ ಮಹಿಳೆಯೊಬ್ಬರು ಹನಿಮೂನ್ ಮೊಟಕುಗೊಳಿಸಿ ಮನೆಗೆ ವಾಪಸ್ ಆಗಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಹೌದು.. ಅದ್ಧೂರಿಯಾಗಿ ವಿವಾಹವಾಗಿ ಹನಿಮೂನ್ ಗೆ ಹೋಗಿದ್ದ 26 ವರ್ಷದ ಮಹಿಳೆಯೊಬ್ಬರು ದಿಢೀರ್ ಮನೆಗೆ ವಾಪಸ್ ಆಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್‍ನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಐಶ್ವರ್ಯಾ ಅವರು ಒಂದು ತಿಂಗಳ ಹಿಂದೆ ಬಾಬಣ್ಣ ಲೇಔಟ್‍ ನಿವಾಸಿ ಲಿಖಿತ್ ಅವರನ್ನು ಮದುವೆ ಆಗಿದ್ದರು. ಐಶ್ವರ್ಯಾ ಅವರು ಎಂಬಿಎ ಓದಿದ್ದರು. ಲಿಖಿತ್ ಡಿಪ್ಲೊಮಾ ಓದಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.

'ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಐಶ್ವರ್ಯಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ಐಶ್ವರ್ಯಾ ಅವರ ಮೃತದೇಹ ಪತ್ತೆಯಾಗಿದೆ. ಕೊಲೆ, ವರದಕ್ಷಿಣೆ ಸಾವು ಪ್ರಕರಣ ದಾಖಲಿಸಿಕೊಂಡು ಲಿಖಿತ್ ಹಾಗೂ ಅವರ ಕುಟುಂಬದವರಾದ ಅರುಣಾ, ವರುಣ್‌ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

40 ಲಕ್ಷ ರೂ ವೆಚ್ಚದ ಅದ್ಧೂರಿ ಮದುವೆ..

ಕಳೆದ ಅಕ್ಟೋಬರ್ 29ರಂದು ಸೂರಜ್ ಎಂಬಾತನ ಜೊತೆ ಯುವತಿ ಮದುವೆ ಆಗಿತ್ತು, ಮದುವೆಯಾಗಿ ಬಹುತೇಕ ಒಂದು ತಿಂಗಳ ನಂತರ ಗಂಡನ ಮನೆಯವರ ಬೇಡಿಕೆಯಂತೆ ಸುಮಾರು 40 ಲಕ್ಷ ಖರ್ಚು ಮಾಡಿ ನವೆಂಬರ್ 23 ರಂದು ಪ್ಯಾಲೇಸ್ ಗ್ರೌಂಡ್ಸ್​​ನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ಮಾಡಿದ್ದರು.

ನಂತರ ನವದಂಪತಿಗಳು ಹತ್ತು ದಿನಗಳ ಕಾಲ ಶ್ರೀಲಂಕಾಗೆ ಹನಿಮೂನ್ ಹೋಗಿದ್ದರು. ಆದರೆ ಇನ್ನೂ ಐದು ದಿನ ಇರುವಾಗಲೇ ಅರ್ಧದಲ್ಲೇ ಇಬ್ಬರು ವಾಪಸ್​​ ಬಂದಿದ್ರು. ಈ ಬಗ್ಗೆ ಯುವತಿಯ ಕುಟುಂಬದವರು ಸೂರಜ್​ ಮನೆಯವರಿಗೆ ಪ್ರಶ್ನೆ ಮಾಡಿದ್ರೆ ನಿಮ್ಮ ಮಗಳನ್ನ ಕರೆದುಕೊಂಡು ಹೋಗ್ರಿ ಎಂದಿದ್ದರು ಎಂಬ ಆರೋಪ ಕೇಳಿಬಂದಿದೆ.

ಆತ್ಮಹತ್ಯೆ ಯತ್ನ, ಆಸ್ಪತ್ರೆಯಲ್ಲಿ ಸಾವು

ಹನಿಮೂನ್​​ನಿಂದ ಅರ್ಧಕ್ಕೆ ವಾಪಸ್​​ ಬಂದಿದ್ದ ನವವಿವಾಹಿತೆ ಗಂಡನ ಮನೆ ಬಿಟ್ಟು ತವರು ಮನೆಗೆ ವಾಪಸ್​​ ಬಂದಿದ್ದಳು. ಆದ್ರೆ ಬುಧವಾರ ಮಧ್ಯಾಹ್ನ ನೇಣಿಗೆ ಶರಣಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವರದಕ್ಷಿಣೆ ಕಿರುಕುಳ ಆರೋಪ

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಐಶ್ವರ್ಯಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಲಿಖಿತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಲಿಖಿತ್, ಸಣ್ಣಪುಟ್ಟ ವಿಚಾರಕ್ಕೂ ಪತ್ನಿಯೊಂದಿಗೆ ಜಗಳವಾಡಿ ನಿಂದಿಸುತ್ತಿದ್ದರು. ಪ್ರತಿ ವಿಚಾರದಲ್ಲೂ ತಾಯಿಯ ಆಣತಿಯಂತೆ ನಡೆದುಕೊಳ್ಳುತ್ತಿದ್ದರು. ಈ ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಬುಧವಾರ ಬೆಳಿಗ್ಗೆ ಲಿಖಿತ್‌ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏನಾಗಿತ್ತು?

ಹನಿಮೂನ್ ಗೆ ಈ ಜೋಡಿ ಶ್ರೀಲಂಕಾಗೆ ಹೋಗಿತ್ತು. ಶ್ರೀಲಂಕಾ ಪ್ರವಾಸದಲ್ಲಿ ದಂಪತಿ ಮಧ್ಯೆ ಆದ ಸಮಸ್ಯೆ ಬಗ್ಗೆ ಮೂಡ್ತಿರುವ ಪ್ರಶ್ನೆ ಮೂಡಿದೆ. ಮದುವೆ ನಂತರ ಸೂರಜ್​ ಹಾಗೂ ಆತನ ಮನೆಯವರು ಒಡವೆ ಮತ್ತು ವರದಕ್ಷಿಣೆಗೆ ಕಿರುಕುಳ ನೀಡ್ತಿದ್ದ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಯುವತಿಯ ಪೋಷಕರು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಲಿಖಿತ್‌ ಹಾಗೂ ಕುಟುಂಬಸ್ಥರು, ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಪುತ್ರಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಐಶ್ವರ್ಯಾ ಅವರ ತಂದೆ ಕೃಷ್ಣ ಅವರು ದೂರು ಕೊಟ್ಟಿದ್ದಾರೆ. ಪೋಷಕರ ದೂರಿನನ್ವಯ ಪತಿ ಸೂರಜ್, ಅತ್ತೆ ಜಯಂತಿ ಹಾಗೂ ಸೂರಜ್ ಅಣ್ಣ ಸಂಜಯ್ ಮೇಲೆ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಎಂದು ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಸೂರಜ್ ಕುಟುಂಬಸ್ಥರನ್ನ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಮಹಿಳೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103 (ಕೊಲೆ), 80 (ವರದಕ್ಷಿಣೆ ಸಾವು), ಮತ್ತು 85 (ಗಂಡ ಅಥವಾ ಗಂಡನ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರು ಅರಮನೆ ಬಳಿ ಸಿಲಿಂಡರ್‌ ಸ್ಪೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಭಾರತ- ಅಮೆರಿಕ ನಡುವಿನ ಸಂಬಂಧ ಹಳ್ಳಹಿಡಿಸಲು ಯತ್ನದ ಆರೋಪ: ಚೀನಾ ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ: ವರದಿ

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video

ಜನರಿಂದ 'ಚಪ್ಪಲಿ'ಯಲ್ಲಿ ಹೊಡೆಸ್ತೇನೆ: ಮಾಗಡಿ ತಹಶೀಲ್ದಾರ್ ಗೆ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಆವಾಜ್! ವಿಡಿಯೋ ವೈರಲ್

SCROLL FOR NEXT