ಎಚ್. ಡಿ. ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ  
ರಾಜ್ಯ

'ಮದ್ಯದಂಗಡಿ ಹರಾಜು' ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ: ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ!

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್ ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಜಾನೆಯನ್ನು ಬರಿದು ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ದಾವಣಗೆರೆ: ಮದ್ಯದಂಗಡಿ ಪರವಾನಗಿಗೆ 1. 95 ಕೋಟಿ ರೂ. ನಿಗದಿಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಬೃಹತ್ ಉದ್ದಿಮೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮದ್ಯದಂಗಡಿ ಹರಾಜು ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ ಎಂದು ಗುರುವಾರ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಇಲಾಖೆಯನ್ನೂ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್ ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಜಾನೆಯನ್ನು ಬರಿದು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಖಜಾನೆಯಿಂದ ಸಾವಿರಾರು ಕೋಟಿ ಹಣ ಬಿಡುಗಡೆಯಾಗಿರುವುದು ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ, ಹಲವು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇಂತಹ ಆರ್ಥಿಕ ತಜ್ಞರನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ-ಖರ್ಗೆ ಭೇಟಿ: ಮತ್ತೆ ಚಾಲ್ತಿಗೆ ಬಂದ ಸಿಎಂ ಬದಲಾವಣೆ ಊಹಾಪೋಹ, ಸಿಡಬ್ಲ್ಯುಸಿ ಸಭೆ ಕುರಿತು ಮಹತ್ವದ ಮಾತು!

'ರಾಷ್ಟ್ರೀಯ ಪ್ರೇರಣಾ ಸ್ಥಳ' ಲೋಕಾರ್ಪಣೆ: ಭಾರತದಲ್ಲಿ ಟೆಲಿಕಾಂ ಕ್ರಾಂತಿಯ ವೇಗ ಹೆಚ್ಚಿಸಿದ ಶ್ರೇಯಸ್ಸು ಅಟಲ್ ಜಿಗೆ ಸಲ್ಲುತ್ತದೆ- ಪ್ರಧಾನಿ ಮೋದಿ

ಚಿತ್ರದುರ್ಗ: ಖಾಸಗಿ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ, ಬೆಂಕಿ​​​​; 9 ಮಂದಿ ಸಜೀವ ದಹನ, ಹಲವರಿಗೆ ಗಂಭೀರ ಗಾಯ; ತನಿಖೆಗೆ ಆದೇಶ; Video

ಚಿತ್ರದುರ್ಗ ಬಸ್ ದುರಂತ: ಸಿಎಂ ಸಿದ್ದರಾಮಯ್ಯ-ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

'ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು': ದರ್ಶನ್-ಸುದೀಪ್ ಫ್ಯಾನ್ಸ್ ವಾರ್ ಕುರಿತು ಶಿವಣ್ಣ ಖಡಕ್ ಮಾತು!

SCROLL FOR NEXT