ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಅಧಿಕಾರ ಶಾಶ್ವತವಲ್ಲ; ತಮ್ಮ ತಂದೆಯ ಇಚ್ಛೆಯಂತೆಯೇ ನಡೆಯುವೆ: ಯತೀಂದ್ರ ಸಿದ್ದರಾಮಯ್ಯ

ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ.

ಚಿಕ್ಕೋಡಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ ಪ್ರತಿಕ್ರಿಯೆ ನೀಡದೇ ಅಂತರ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕವಲಗುಡ್ಡ ಗ್ರಾಮದಲ್ಲಿ ನಡೆದ ಖಾಸಗಿ ಶಾಲೆಯ ವಾರ್ಷಿಕೋತ್ಸವದಲ್ಲಿ ಭಾಗಿಯಾಗಿದ್ದ ಅವರು, ಸುದ್ದಿಗಾರರ ಪ್ರಶ್ನೆಗಳಿಗೆ ಅತೀ ಜಾಗರೂಕತೆಯಿಂದ ಉತ್ತರಿಸಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತೀಂದ್ರ, ಸಿಎಂ ಬದಲಾವಣೆ ಬಗ್ಗೆ ನಾನು ಈಗಾಗಲೇ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ಮತ್ತೊಮ್ಮೆ ನಾನು ಏನನ್ನೂ ಹೇಳಬೇಕಿಲ್ಲ. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಅಧಿಕಾರ ಯಾರಿಗೂ ಶಾಶ್ವತವಲ್ಲ ಹೀಗಾಗಿ ಈ ವಿಚಾರದಲ್ಲಿ ನಾನು ಹೆಚ್ಚಿಗೆ ಮಾತನಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಪೂರ್ಣವಿರಾಮ ಇಡಲು ಪ್ರಯತ್ನಿಸಿದರು. ಈ ಹಿಂದೆ 'ಐದು ವರ್ಷ ನಮ್ಮಪ್ಪನೇ ಸಿಎಂ' ಎಂದು ಹೇಳಿಕೆ ನೀಡುವ ಮೂಲಕ ಯತೀಂದ್ರ ಅವರು ಪಕ್ಷದೊಳಗೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಿದ್ದರು.

ಹಿಂದುಳಿದವರ, ದೀನ ದಲಿತರ, ಅಲ್ಪಸಂಖ್ಯಾತರ ಶ್ರೇಯಸ್ಸಿಗಾಗಿ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲಿರುಳು ಶ್ರಮಿಸುತ್ತಿದ್ದು ಅವರ ಇಚ್ಛೆಯಂತೆ ತಾವು ಕೂಡಾ ನಡೆಯುವುದಾಗಿ, ಅಹಿಂದ ಜನರ ಪರವಾಗಿ ಶ್ರಮಿಸುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

TNIE ವರದಿ ಫಲಶೃತಿ: ಸ್ವಚ್ಛತೆ ಪರಿಶೀಲಿಸಲು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಪಿಗೆ ಭೇಟಿ

SCROLL FOR NEXT