ಮೃತ ರೈತ 
ರಾಜ್ಯ

ದಾವಣಗೆರೆ: ತಾಳೆ ಬೆಳೆ ರಕ್ಷಿಸಲು ಹೋಗಿ ರೈತ ಸಜೀವದಹನ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ ಮೃತ ರೈತರಾಗಿದ್ದಾರೆ.

ದಾವಣಗೆರೆ: ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ನಡೆದಿದೆ,

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ (75ವ) ಎಂಬುವವರ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಾಳೆ ಮರ ಬೆಳೆಯಲಾಗಿದ್ದು, ಇದ್ದಕ್ಕಿದ್ದಂತೆ ತಾಳೆ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಾಬರಿಗೊಂಡ ರೈತ ಈಶ್ವರಪ್ಪ ಬೆಂಕಿ ನಂದಿಸಲು ಹೋಗಿ ತಾವೇ ಸಜೀವ ದಹನಗೊಂಡಿದ್ದಾರೆ.

ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಮನೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಸುಟ್ಟು ಕರಕಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಐಕೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಎಲ್ಲರೂ ಕೆಲಸಕ್ಕೆ ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಹೆಬೂಬ್ ಎನ್ನುವವರಿಗೆ ಸೇರಿದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಮನೆ ವ್ಯಾಪಿಸಿಕೊಂಡಿತು. ಪರಿಣಾಮ ಮನೆಯಲ್ಲಿದ್ದ 2 ಲಕ್ಷ ನಗದು ಹಾಗೂ 30 ಗ್ರಾಂ ಚಿನ್ನ ಸುಟ್ಟು ಕರಲಾಗಿದೆ.

ರಾಗಿ ಮೆದೆಗೆ ಬೆಂಕಿ

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಜಯಪುರ ಗೇಟ್​ ಬಳಿ ಅಗ್ನಿ ಅವಘಡ ಸಂಭವಿಸಿದೆ. ಕಿಡಿಗೇಡಿಗಳು ಬೇಕಂತಲೇ ರಾಗಿ ಮೆದೆಗೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಇದರಿಂದ ಒಕ್ಕಣೆ ಮಾಡಲು ಹಾಕಲಾಗಿದ್ದ ರಾಗಿ ಮೆದೆ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್