ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ 
ರಾಜ್ಯ

ಹೊಸ ವರ್ಷದ ಸಂಭ್ರಮ: ಖುದ್ದು ಭದ್ರತೆ ಪರಿಶೀಲಿಸಿದ ಪೊಲೀಸ್ ಆಯುಕ್ತ, ಬೆಂಗಳೂರಿನಲ್ಲಿ ಹೈ ಅಲರ್ಟ್

ಸಿಸಿಟಿವಿ ಮತ್ತು ಲೈವ್ ಮಾನಿಟರಿಂಗ್ ವ್ಯವಸ್ಥೆ, AI ಆಧಾರಿತ ಜನಸಂಚಾರ ವಿಶ್ಲೇಷಣಾ ಸಾಧನಗಳು, ಬ್ಯಾರಿಕೇಡ್‌ಗಳು ಮತ್ತು ಪ್ರವೇಶ ನಿಯಂತ್ರಣ, ತುರ್ತು ಪ್ರತಿಕ್ರಿಯೆ ಮತ್ತು ಭದ್ರತಾ ಪ್ರೋಟೋಕಾಲ್‌ಗಳನ್ನು ಆಯುಕ್ತರು ಪರಿಶೀಲಿಸಿದ್ದಾರೆ.

ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದ್ದು, ಈ ನಡುವೆ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ಬೆಂಗಳೂರು ನಗರ ಪೊಲೀಸ್ ಸಿದ್ಧತೆ ನಡೆಸುತ್ತಿದ್ದಾರೆ.

ನಗರಾದ್ಯಂತ ಜಾರಿಗೊಳಿಸಿರುವ ಭದ್ರತಾ ಕ್ರಮಗಳನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಗುರುವಾಪ ಖುದ್ದು ಪರಿಶೀಲನೆ ನಡೆಸಿದ್ದಾರೆ.

ಸಿಸಿಟಿವಿ ಮತ್ತು ಲೈವ್ ಮಾನಿಟರಿಂಗ್ ವ್ಯವಸ್ಥೆ, AI ಆಧಾರಿತ ಜನಸಂಚಾರ ವಿಶ್ಲೇಷಣಾ ಸಾಧನಗಳು, ಬ್ಯಾರಿಕೇಡ್‌ಗಳು ಮತ್ತು ಪ್ರವೇಶ ನಿಯಂತ್ರಣ, ತುರ್ತು ಪ್ರತಿಕ್ರಿಯೆ ಮತ್ತು ಭದ್ರತಾ ಪ್ರೋಟೋಕಾಲ್‌ಗಳನ್ನು ಆಯುಕ್ತರು ಪರಿಶೀಲಿಸಿದ್ದಾರೆ.

ನಂತರ ಮಾತನಾಡಿದ ಸೀಮಂತ್ ಕುಮಾರ್ ಅವರು, ಜನಸಂಚಾರವನ್ನು ವಾಸ್ತವವಾಗಿ ಅರ್ಥಮಾಡಿಕೊಳ್ಳಲು ಕ್ರಿಸ್ ಮಸ್ ಹಬ್ಬದ ದಿನದಂದು ಭೇಟಿ ನೀಡಲಾಗಿದೆ. ಹೊಸ ವರ್ಷದ ದಿನದ ಭದ್ರತೆಗೆ ನಾಗರಿಕರೂ ಕೂಡ ಪೊಲೀಸರಿಗೆ ಸಹಕಾರ ನೀಡಬೇಕು. ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಿ, ಸುರಕ್ಷಿತವಾಗಿ ಹೊಸ ವರ್ಷವನ್ನು ಆಚರಿಸಬೇಕೆಂದು ಹೇಳಿದರು.

ಪೊಲೀಸರು ಈಗಾಗಲೇ ತಯಾರಿಗಳನ್ನು ನಡೆಸಿದ್ದಾರೆ. ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ, ಅವುಗಳು ಸಮರ್ಥವಾಗಿವೆ ಎಂದು ವಿಶ್ಲೇಷಣೆ ಮಾಡುತ್ತಿದ್ದೇವೆ. ಯಾವುದೇ ಹೆಚ್ಚುವರಿ ಅಗತ್ಯಗಳು ಇದ್ದರೆ ಅವುಗಳನ್ನು ಗಮನಿಸುತ್ತೇವೆ. ಮಹಿಳೆಯರ ಭದ್ರತೆ, ಜನಸಂಚಾರ ಮತ್ತು ಟ್ರಾಫಿಕ್ ನಿಯಂತ್ರಣ ಆದ್ಯತೆಯಾಗಿದ್ದು, ನಗರವನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳುವುದೇ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!