ವಿಶೇಷ ರೈಲು 
ರಾಜ್ಯ

ಬೆಂಗಳೂರು-ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲು: ಖಾಯಂಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು–ವಿಜಯಪುರ ರೈಲುಗಳನ್ನು ಹುಬ್ಬಳ್ಳಿ–ಗದಗ ಬೈಪಾಸ್ ಮೂಲಕ ಓಡಿಸಲು ನಡೆದ ನಮ್ಮ ಪ್ರಯತ್ನಕ್ಕೆ ಮೊದಲ ಯಶಸ್ಸು ದೊರೆತಿದೆ. ಈ ಹೊಸ ಮಾರ್ಗದ ಮೂಲಕ ಒಂದು ವಿಶೇಷ ರೈಲು ಯಶಸ್ವಿಯಾಗಿ ಓಡಿದೆ, ಇದರಿಂದ ಎಂಜಿನ್ ಬದಲಾವಣೆ ತಪ್ಪಿದ್ದು ಸಮಯ ಉಳಿತಾಯವಾಗಿದೆ.

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ಕಲ್ಪಿಸಿರುವ ವಿಶೇಷ ರೈಲು ಸೇವೆಯನ್ನು ಖಾಯಂಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ.ಪಾಟೀಲ್ ಅವರು, ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು–ವಿಜಯಪುರ ರೈಲುಗಳನ್ನು ಹುಬ್ಬಳ್ಳಿ–ಗದಗ ಬೈಪಾಸ್ ಮೂಲಕ ಓಡಿಸಲು ನಡೆದ ನಮ್ಮ ಪ್ರಯತ್ನಕ್ಕೆ ಮೊದಲ ಯಶಸ್ಸು ದೊರೆತಿದೆ. ಈ ಹೊಸ ಮಾರ್ಗದ ಮೂಲಕ ಒಂದು ವಿಶೇಷ ರೈಲು ಯಶಸ್ವಿಯಾಗಿ ಓಡಿದೆ, ಇದರಿಂದ ಎಂಜಿನ್ ಬದಲಾವಣೆ ತಪ್ಪಿದ್ದು ಸಮಯ ಉಳಿತಾಯವಾಗಿದೆ.

ಬಾಗಲಕೋಟೆ–ವಿಜಯಪುರದ ಎಲ್ಲ ರೈಲುಗಳನ್ನು ಈ ಬೈಪಾಸ್ ಮೂಲಕ ಓಡಿಸಿದರೆ, ಪ್ರಯಾಣದ ಸಮಯವನ್ನು 14 ರಿಂದ 10 ಗಂಟೆಗಳಿಗೆ ಇಳಿಸಬಹುದು. ಜೊತೆಗೆ ಪ್ರಯಾಣ ದರವೂ ಕಡಿಮೆಯಾಗಲಿದೆ. ಇದನ್ನು ಸಾಧಿಸಲು ಮೈಸೂರು–ಪಂಡರಪುರ ಎಕ್ಸ್ಪ್ರೆಸ್ ಅನ್ನು ಶಾಶ್ವತವಾಗಿ ಈ ಬೈಪಾಸ್ ಮೂಲಕ ಓಡಿಸಬೇಕು. ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು. ಕೇಂದ್ರ ರೈಲ್ವೆ ಸಚಿವರಿಗೆ ಈ ಬೇಡಿಕೆಯನ್ನು ಮುಂದಿರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂನ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!

ಕೇಂದ್ರ ಸರ್ಕಾರದ ದಿಟ್ಟ ಕ್ರಮ: ಹುರಿಯತ್ ಅಧ್ಯಕ್ಷ ಸ್ಥಾನಕ್ಕೆ ಮಿರ್ವೈಜ್ ಉಮರ್ ಫಾರೂಕ್ ರಾಜೀನಾಮೆ

Vijay Hazare Trophy: 'ಅದ್ಭುತ ಕ್ಯಾಚ್.. ರೋಹಿತ್ ಭಾಯ್ ಗೆ ಹೊಡಿರೋ ಚಪ್ಪಾಳೆ': ಪ್ರೇಕ್ಷಕರಿಗೆ ಮುಷೀರ್ ಖಾನ್ ಮನವಿ! Video

Vijay Hazare Trophy: ಕೊಹ್ಲಿ ಮತ್ತೊಂದು ದಾಖಲೆ, ಆಯ್ಕೆದಾರರಿಗೆ ಪೃಥ್ವಿ ಶಾ ಖಡಕ್ ಸಂದೇಶ, ರೋಹಿತ್ ಶರ್ಮಾ ಗೋಲ್ಡನ್ ಡಕೌಟ್..!

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

SCROLL FOR NEXT