ಗಜೇಂದ್ರ ಸಿಂಗ್ ಶೇಖಾವತ್ 
ರಾಜ್ಯ

TNIE ವರದಿ ಫಲಶೃತಿ: ಸ್ವಚ್ಛತೆ ಪರಿಶೀಲಿಸಲು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಪಿಗೆ ಭೇಟಿ

ಕಳೆದ ವಾರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಯ ಸಂದರ್ಭದಲ್ಲಿ ಹಂಪಿಯಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಕೊರತೆಯ ಕುರಿತು TNIE ವರದಿಯನ್ನು ಸಂಪುಟ ಚರ್ಚೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಂಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಇತ್ತೀಚಿನ ಭೇಟಿಯ ಸಂದರ್ಭದಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಕಳಪೆ ನಿರ್ವಹಣೆಯನ್ನು ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು.

ಪತ್ರಿಕೆ ವರದಿಯನ್ನು ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಜನವರಿ ಮೊದಲ ವಾರದಲ್ಲಿ ಹಂಪಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಕಳೆದ ವಾರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಯ ಸಂದರ್ಭದಲ್ಲಿ ಹಂಪಿಯಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಕೊರತೆಯ ಕುರಿತು TNIE ವರದಿಯನ್ನು ಸಂಪುಟ ಚರ್ಚೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪತ್ರಿಕೆ ವರದಿ ನಂತರ ರಾಜ್ಯ ಸರ್ಕಾರವು ವಿಜಯನಗರ ಜಿಲ್ಲಾಡಳಿತದಿಂದ ಈ ಲೋಪದ ಬಗ್ಗೆ ವಿವರಣೆಯನ್ನು ಕೋರಿತು.

ಹಂಪಿಯಲ್ಲಿ ನಡೆದ ಚಿಂತನಾ ಕಾರ್ಯಾಗಾರದಲ್ಲಿ ಮುಂಬರುವ ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಚರ್ಚೆಗಳಿಗಾಗಿ ಸೀತಾರಾಮನ್ ಅವರ ಹಂಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಕೋದಂಡರಾಮ ದೇವಾಲಯದ ಬಳಿ ಮಾನವ ತ್ಯಾಜ್ಯ ಸೇರಿದಂತೆ ಕಸದ ರಾಶಿ ಕಂಡುಬಂದಿತ್ತು. ಪರಿಸ್ಥಿತಿಯಿಂದ ಅಸಮಾಧಾನಗೊಂಡ ಹಣಕಾಸು ಸಚಿವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿ ತಮ್ಮ ಖಾಸಗಿ ಹೋಟೆಲ್‌ಗೆ ಮರಳಿದರು. ಈ ವೇಳೆ ಹಣಕಾಸು ಸಚಿವಾಲಯದ ಸುಮಾರು 120 ಹಿರಿಯ ಅಧಿಕಾರಿಗಳು ಅವರೊಂದಿಗೆ ಇದ್ದರು.

ಪಾರಂಪರಿಕ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ವಿಫಲವಾದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಬಗ್ಗೆ ಸೀತಾರಾಮನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ . ಮುಂದಿನ ಭೇಟಿಗೂ ಮುನ್ನ ಸಮಸ್ಯೆ ಪರಿಹರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೀಗಾಗಿ ಸಮಸ್ಯೆ ಬಗ್ಗೆ ತಿಳಿಯಲು ಮತ್ತು ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಲು ಹಂಪಿಗೆ ಭೇಟಿ ನೀಡುವುದಾಗಿ ಶೇಖಾವತ್ ಸಂಪುಟಕ್ಕೆ ಭರವಸೆ ನೀಡಿದ್ದಾರೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ, ಶೇಖಾವತ್ ಜನವರಿ 6 ರಂದು ಹಂಪಿಗೆ ಭೇಟಿ ನೀಡಲಿದ್ದಾರೆ.

ಗುರುವಾರ, ಉಪ ಆಯುಕ್ತೆ ಕವಿತಾ ಮನ್ನಿಕೇರಿ, ಹಿರಿಯ ಜಿಲ್ಲಾ ಅಧಿಕಾರಿಗಳೊಂದಿಗೆ ಹಂಪಿ ಪರಂಪರೆಯ ಪ್ರದೇಶದ ಪರಿಶೀಲನೆ ನಡೆಸಿದರು. ಕಳಪೆ ನಿರ್ವಹಣೆಗಾಗಿ ASI ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಡಿಸೆಂಬರ್ 23 ರಂದು ಪ್ರಕಟವಾದ TNIE ವರದಿಯ ಆಧಾರದ ಮೇಲೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಜಿಲ್ಲಾಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,.

ಈ ಸಮಸ್ಯೆಯ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ಎರಡು ವರ್ಷಗಳಿಂದ, ಹಂಪಿಯಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಮತ್ತು ಕಳಪೆ ನಿರ್ವಹಣೆಯ ಬಗ್ಗೆ ಜಿಲ್ಲಾಡಳಿತವು ಎಎಸ್‌ಐಗೆ ಪದೇ ಪದೇ ಪತ್ರ ಬರೆದಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ BJP: ತಿರುವನಂತಪುರಂನ ಮೇಯರ್ ಆಗಿ ವಿ.ವಿ ರಾಜೇಶ್ ಆಯ್ಕೆ!

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಸ್ಥಳ ಪರಿಶೀಲನೆ ನಡೆಸಿದ ಎನ್‌ಐಎ ತಂಡ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಪ್ರಗತಿ ಸಾಧಿಸುತ್ತಿದೆ; ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಅವನತಿಯತ್ತ: ಎಚ್‌ಡಿ ಕುಮಾರಸ್ವಾಮಿ

ಚಿತ್ರದುರ್ಗ ಬಸ್ ದುರಂತ: ಖಾಸಗಿ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

SCROLL FOR NEXT