ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ 
ರಾಜ್ಯ

ಡಿಕೆಶಿಗೆ 'ಸಿಎಂ ಕುರ್ಚಿ' ಸಿಗುತ್ತಾ? ಕೋಡಿಶ್ರೀ ಸ್ಫೋಟಕ ಭವಿಷ್ಯ!

ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿ ಶ್ರೀಗಳು, ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೊದು ಅಷ್ಟು ಸುಲಭವಲ್ಲ, ಕಷ್ಟ ಕಷ್ಟ ಎಂದಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಹಾಗೂ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಬೆಂಬಲಿಗರ ನಡುವಿನ ಬಣ ಬಡಿದಾಟ, ಪರ, ವಿರೋಧ ಅಭಿಪ್ರಾಯಗಳ ನಡುವೆ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿ ಶ್ರೀಗಳು, ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೊದು ಅಷ್ಟು ಸುಲಭವಲ್ಲ, ಕಷ್ಟ ಕಷ್ಟ ಎಂದಿದ್ದಾರೆ.

ತಾನಾಗಿಯೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಧಿಕಾರ ಬಿಟ್ಟು ಕೊಟ್ರೇ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು ಎಂದಿದ್ದಾರೆ.

ಸಿದ್ದರಾಮಯ್ಯ ತಾನೇ ಅಧಿಕಾರ ಬಿಟ್ಟು ಕೊಡುವವರೆಗೂ ಡಿಕೆಶಿಗೆ ಅಧಿಕಾರ ಸಿಗೊದಿಲ್ಲ ಅಂತ ಪರೋಕ್ಷವಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವ ಡಿಕೆ ಶಿವಕುಮಾರ್​ಗೆ ಕೋಡಿ ಶ್ರೀ ಭವಿಷ್ಯ ನಿರಾಸೆ ಮೂಡಿಸಿದೆ.

ಅರಸನ ಅರಮನೆಗೆ ಕಾರ್ಮೋಡ ಕವಿದಿದೆ. ಅರಸನ ಬಂಡಾರವೇ ಬಜೆಟ್ ಎಂದಿದ್ದಾರೆ. ವರ್ಷದ ಬಜೆಟ್​ ಮುಗಿದ ಬಳಿಕ ಅವರಾಗಿ ಸ್ಥಾನ ಬಿಟ್ಟು ಕೊಟ್ಟರೆ ಮಾತ್ರ ಬೇರೆಯವರಿಗೆ ಅವಕಾಶವಿದೆ. ಇಲ್ಲವಾದ್ರೆ ಕಷ್ಟವಿದೆ. ಕೇಂದ್ರದಲ್ಲೂ ಪರಿಸ್ಥಿತಿ ಬದಲಾವಣೆ ಕಷ್ಟವಾಗುತ್ತೆ ಎಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮ

ಬಿಜೆಪಿಗೆ ನೂತನ ಸಾರಥಿ: ಜನವರಿ 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!

ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಹೊಸ ಆಯಾಮ ಪಡೆದ 'ಮರಾಠಿ ಭಾಷಾ' ವಿವಾದ! ಆರು ವರ್ಷದ ಮಗಳನ್ನೇ ಕೊಂದ ತಾಯಿ!

ಮಧ್ಯಪ್ರದೇಶ: ಬಿಜೆಪಿ ನಾಯಕ ಚಲಾಯಿಸುತ್ತಿದ್ದ ಕಾರು ಗ್ರಾಮಸ್ಥರಿಗೆ ಡಿಕ್ಕಿ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

SCROLL FOR NEXT