ರಾಜ್ಯ

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ವಿವಾಹಿತ ಬಲಿ; ತಾನೂ ದೂರವಿಟ್ಟರೂ ಬೆಂಬಿಡದ ಮಹಿಳೆ, ಹೆದರಿ ಆತ್ಮಹತ್ಯೆ!

ಮದುವೆಯಾಗಿ 6 ವರ್ಷದ ಮಗುವಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುರ: ಮದುವೆಯಾಗಿ 6 ವರ್ಷದ ಮಗುವಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ 30 ವರ್ಷದ ಬಾಲಾಜಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿಡ್ಲಘಟ್ಟ ಮೂಲದ ಮಹಿಳೆ ಜೊತೆ ಬಾಲಾಜಿ ಸಿಂಗ್ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನು. ಈ ವಿಚಾರ ತಿಳಿದ ಬಾಲಾಜಿ ಸಿಂಗ್ ಪತ್ನಿ ಜಗಳ ಮಾಡಿದ್ದಳು. ನಂತರ ಪೋಷಕರು ಬಾಲಾಜಿಗೆ ಬುದ್ಧಿ ಹೇಳಿದ್ದರು.

ಅದರಂತೆ ಮಹಿಳೆಯ ಸಹವಾಸ ಬಿಟ್ಟು ಬಾಲಾಜಿ ತಾನಾಯಿತು ತನ್ನ ಕುಟುಂಬ ಅಂತ ಸುಮ್ಮನಿದ್ದನು. ಆದರೆ ಮಹಿಳೆ ಮಾತ್ರ ಬಾಲಾಜಿಯನ್ನು ಬಿಡಲು ಇಚ್ಛಿಸಲಿಲ್ಲ. ಬಾಲಾಜಿ ಸಿಂಗ್ಗೆ ಹನಿಟ್ರಾಪ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದಳು. ಇದರಿಂದ ನೊಂದು ಬಾಲಾಜಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಬಾಲಾಜಿ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assam: SIR ನಂತರ 10.56 ಲಕ್ಷ ಮತದಾರರ ಹೆಸರು ಡಿಲೀಟ್

2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮ

ಬಿಜೆಪಿಗೆ ನೂತನ ಸಾರಥಿ: ಜನವರಿ 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!

ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಹೊಸ ಆಯಾಮ ಪಡೆದ 'ಮರಾಠಿ ಭಾಷಾ' ವಿವಾದ! ಆರು ವರ್ಷದ ಮಗಳನ್ನೇ ಕೊಂದ ತಾಯಿ!

SCROLL FOR NEXT