ಕಳ್ಳಿಯರ ಬಂಧನ 
ರಾಜ್ಯ

ಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದಲ್ಲಿ ಅಜ್ಜಿಯ ಚಿನ್ನದ ಸರ ಕಳವು: ಮೂವರು ಕಳ್ಳಿಯರ ಬಂಧನ; Video

ಬಂಧಿತರನ್ನು ತಮಿಳುನಾಡಿನ ಶೀಥಲ್, ಕಾಳಿಯಮ್ಮ, ಮಾರಿ ಎಂದು ಗುರುತಿಸಲಾಗಿದೆ.

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಲಪಟಾಯಿಸಿದ ಮೂವರು ಕಳ್ಳಿಯರನ್ನು ಬಂಧಿಸಲಾಗಿದೆ.

ಬಂಧಿತರನ್ನು ತಮಿಳುನಾಡಿನ ಶೀಥಲ್, ಕಾಳಿಯಮ್ಮ, ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ಈ ಮೂವರು ಕಳ್ಳಿಯರು ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದರು. ಇದು ಸಿಸಿಟಿವಿಯಲ್ಲಿ ಸೆರೆಯಾಗಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಸರವನ್ನು ಪೂಜೆಯ ಸಂದರ್ಭದಲ್ಲಿ ಮೂವರು ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಕದ್ದಿದ್ದಾರೆ. ಸಿಸಿಟಿವಿಯಲ್ಲಿ ಮೂವರ ಕರಾಮತ್ತು ಸೆರೆಯಾಗಿತ್ತು.

ವ್ಯಾಪಕ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ