ಕೇರಳ ಶಾಸಕ ಜಲೀಲ್ 
ರಾಜ್ಯ

ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು: ಸ್ಥಳಕ್ಕೆ ಕೇರಳ ಸಂಸದ ಆಯ್ತು ಈಗ ಶಾಸಕನ ಭೇಟಿ

ಕೇರಳ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಕೆಸರೆರಚಾಟಕ್ಕೆ ಕೇರಳ ನಾಯಕರು, ಕರ್ನಾಟಕ ಸರ್ಕಾರದ ತೀರ್ಮಾನಗಳನ್ನು ಬಳಸಿಕೊಳ್ಳಲು ಆರಂಭಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಉತ್ತರದ ಕೋಗಿಲು ಲೇಔಟ್ ಬಳಿ ಜಿಬಿಎ ಅಧಿಕಾರಿಗಳು ಅಕ್ರಮ ಮನೆಗಳನ್ನು ತೆರವುಗೊಳಿಸಿದ್ದ ಪ್ರಕರಣದಲ್ಲಿ ಕೇರಳ ಸರ್ಕಾರ ರಾಜಕೀಯ ನಡೆಸುತ್ತಿದೆ. ನಿನ್ನೆ ಕೇರಳ ಸಂಸದ ಎಎ ರಹೀಂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇಂದು ಕೇರಳ ಶಾಸಕ ಜಲೀಲ್ ಭೇಟಿ ನೀಡಿದರು. ಕೇರಳ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಕೆಸರೆರಚಾಟಕ್ಕೆ ಕೇರಳ ನಾಯಕರು, ಕರ್ನಾಟಕ ಸರ್ಕಾರದ ತೀರ್ಮಾನಗಳನ್ನು ಬಳಸಿಕೊಳ್ಳಲು ಆರಂಭಿಸಿದೆ.

ಅಕ್ರಮ ನಿವಾಸಿಗಳ ಮನೆಗಳನ್ನು ತೆರವುಗೊಳಿಸಿದ್ದು, ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳು ಸ್ಥಳದಲ್ಲಿ ಪ್ರತಿಭಟನೆ ಮುಂದುವರೆಸಿವೆ. ಈ ಘಟನೆ ಬೆನ್ನಲ್ಲೇ ಕೇರಳ ಸರ್ಕಾರದ ಸಂಸದರು, ಸಚಿವರು, ಶಾಸಕರು ಕೋಗಿಲು ಸ್ಥಳಕ್ಕೆ ಭೇಟಿ ನೀಡಿ ರಾಜಕೀಯ ನಡೆಸುತ್ತಿದ್ದಾರೆ. ಪದೇ ಪದೇ ಕರ್ನಾಟಕದ ವಿಷಯಕ್ಕೆ ಕೇರಳ ಸರ್ಕಾರ ಮೂಗು ತೂರಿಸುತ್ತಿದ್ದು ಈಗ ಕೋಗಿಲು ಲೇಔಟ್ ಬಳಿ ಅಕ್ರಮ ನಿವಾಸಿಗಳ ತೆರವು ಬೆನ್ನಲ್ಲೇ ಬೆಂಗಳೂರಿನ ಕೋಗಿಲು ಬಳಿ ಕೇರಳ ರಾಜಕೀಯ ನಾಯಕರ ದಂಡೆ ಆಗಮಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶ್ರೀಲಂಕಾಗೆ ವೈಟ್ ವಾಷ್ ಭೀತಿ; ಸರಣಿ ಗೆದ್ದ ಭಾರತದ ಮಹಿಳಾ ಪಡೆ

36 ಗಂಟೆಗಳಲ್ಲಿ 80 ಡ್ರೋನ್‌; ಪಾಕ್‌ನ ನೂರ್ ಖಾನ್ ವಾಯುನೆಲೆ ನಾಶ: Operation Sindoor ಒಪ್ಪಿಕೊಂಡ Pak

ಭಾರತ ವಿಶ್ವಗುರು ಆಗುವುದು ನಮ್ಮ ಮಹತ್ವಾಕಾಂಕ್ಷೆಯಲ್ಲ; ಆದರೆ ಅದು ಜಗತ್ತಿಗೆ ಅವಶ್ಯಕ: RSS ಮುಖ್ಯಸ್ಥ ಭಾಗವತ್

ಉಸ್ಮಾನ್ ಹಾದಿ ಹತ್ಯೆ: ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿ- ಬಾಂಗ್ಲಾದೇಶ ಪೊಲೀಸ್

4th T20I: ಇತಿಹಾಸ ಬರೆದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ; ಆಸಿಸ್ ದಾಖಲೆಯೂ ಧ್ವಂಸ!

SCROLL FOR NEXT