ವಾಚರ್ ಸಣ್ಣ ಹೈದ  
ರಾಜ್ಯ

ಹುಲಿ ದಾಳಿಯಿಂದ ಸಾವು: ವಾಚರ್ ಸಣ್ಣ ಹೈದ ಕುಟುಂಬಕ್ಕೆ ವಿಮೆ ಸೇರಿ ಒಟ್ಟಾರೆ 45 ಲಕ್ಷ ರೂ ಪರಿಹಾರ!

ವಾಚರ್ ಸಣ್ಣ ಹೈದ ಅವರ ಹತ್ತಿರದ ಬಂಧುಗಳಿಗೆ ವಿಮೆ ಪರಿಹಾರ ಮತ್ತು ಇಲಾಖೆ ನೀಡುವ ಪರಿಹಾರ ಇತ್ಯಾದಿ ಸೇರಿ ಒಟ್ಟಾರೆ 45 ಲಕ್ಷ ರೂ. ಪರಿಹಾರ ನೀಡುವಂತೆ ಸಚಿವರು ಸೂಚಿಸಿದ್ದಾರೆ.

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬಂಡೀಪುರ ಮರಳಳ್ಳ ಶಿಬಿರದ ಬಳಿ ಹುಲಿ ದಾಳಿಗೆ ಎಪಿಸಿ ವಾಚರ್ ಸಣ್ಣಹೈದ (56) ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಂದರ್ಭದಲ್ಲಿ ಸಣ್ಣ ಹೈದ ಅವರ ಕುಟುಂಬದೊಂದಿಗೆ ಇಲಾಖೆ ಮತ್ತು ಸರ್ಕಾರ ನಿಲ್ಲುತ್ತದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಅವರು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರತಿಯೊಂದು ಜೀವವೂ ಅಮೂಲ್ಯ, ಪರಿಹಾರ ನೀಡುವುದರಿಂದ ಹೋದ ಪ್ರಾಣ ಮರಳಿ ಬರುವುದಿಲ್ಲ ಆದರೂ ಮೃತರ ಕುಟುಂಬಕ್ಕೆ ಆಸರೆಯಾಗಲು, ನಿಯಮಾನುಸಾರ ಮೃತರ ಕುಟುಂಬಕ್ಕೆ ಪರಿಹಾರ ಧನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಅರಣ್ಯ ಇಲಾಖೆಯ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳು ಅರಣ್ಯದೊಳಗೆ ಗಸ್ತು ನಡೆಸುವಾಗ, ಕರ್ತವ್ಯ ನಿರ್ವಹಿಸುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು, ಹೆಚ್ಚು ಎಚ್ಚರದಿಂದ ಇರಬೇಕು ಎಂದು ತಿಳಿಸಿದ್ದಾರೆ.

ವಾಚರ್ ಸಣ್ಣ ಹೈದ ಅವರ ಹತ್ತಿರದ ಬಂಧುಗಳಿಗೆ ವಿಮೆ ಪರಿಹಾರ ಮತ್ತು ಇಲಾಖೆ ನೀಡುವ ಪರಿಹಾರ ಇತ್ಯಾದಿ ಸೇರಿ ಒಟ್ಟಾರೆ 45 ಲಕ್ಷ ರೂ. ಪರಿಹಾರ ನೀಡುವಂತೆ ಸಚಿವರು ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಪ್ರಧಾನಿಯ ಹೊಸ ಕಚೇರಿ 'ಸೇವಾ ತೀರ್ಥ' ಹಾಗೂ ಕರ್ತವ್ಯ ಭವನ ನಾಳೆ ಉದ್ಘಾಟನೆ!

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

SCROLL FOR NEXT