ಡ್ರಗ್ಸ್, ನಗದು ಜಪ್ತಿ 
ರಾಜ್ಯ

ಹೊಸ ವರ್ಷಾಚರಣೆಗೂ ಮುನ್ನ ಬೆಂಗಳೂರಿನಲ್ಲಿ 2.50 ಕೋಟಿ ರೂ ಮೌಲ್ಯದ ಡ್ರಗ್ಸ್, ನಗದು ಜಪ್ತಿ!

ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಯಂತ್ರಣ ವಿಭಾಗವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದೆ.

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು 2.50 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೊದಲ ಪ್ರಕರಣದಲ್ಲಿ, ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಯಂತ್ರಣ ವಿಭಾಗವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದೆ.

ಎರಡೂ ಪ್ರಕರಣಗಳಲ್ಲಿ ಬಂಧಿಸಲಾದ ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆಯನ್ನು ಬಂಧಿಸಿ 2 ಲಕ್ಷ ಹಣ, 1 ಕೆಜಿ 70 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 60 ಎಕ್ಸ್ ಟೆಸಿ ಪಿಲ್ಸ್ ಗಳು, 100 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 5 ಗ್ರಾಂ ಕೊಕೇನ್‌, 2 ಮೊಬೈಲ್‌, 1 ಲ್ಯಾಪ್‌ಟ್ಯಾಪ್‌ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 2.25 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.

ಈ ವಿದೇಶಿ ಪ್ರಜೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ದೆಹಲಿ ಮತ್ತು ಮುಂಬೈನಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಸರಬರಾಜು ಮಾಡಲು ತಯಾರಿ ನಡೆಸಿದ್ದುದು ಗೊತ್ತಾಗಿದೆ.

ಈತನ ವಿರುದ್ಧ ಈ ಹಿಂದೆಯೂ ಸಹ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಪ್ರಕರಣ ದಾಖಲಾಗಿದ್ದು, ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ನಂತರವೂ ಸಹ ಮತ್ತೆ ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿಕೊಂಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದ್ದು, ಇದೀಗ ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ, ಪೊಲೀಸರು ಅಂತರರಾಜ್ಯ ಮಾದಕವಸ್ತು ಮಾರಾಟಗಾರನನ್ನು ಬಂಧಿಸಿದ್ದಾರೆ.

ಆರೋಪಿಯಿಂದ, ಪೊಲೀಸರು 100 LSD ಪಟ್ಟಿಗಳು, ಐದು ಗ್ರಾಂ ಕೊಕೇನ್ ಮತ್ತು ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 25 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!