ಬಯೋಕಾನ್ ಕಂಪನಿ 
ರಾಜ್ಯ

ಬೆಂಗಳೂರು: ಐದನೇ ಮಹಡಿಯಿಂದ ಜಿಗಿದು ಬಯೋಕಾನ್ ಉದ್ಯೋಗಿ ಆತ್ಮಹತ್ಯೆ!

ಇಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಉದ್ಯೋಗಿ ಅನಂತ ಭಟ್(35) ಸಾವಿಗೆ ಶರಣಾಗಿದ್ದಾರೆ.

ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ಇಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಉದ್ಯೋಗಿ ಅನಂತ ಭಟ್(35) ಸಾವಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅನಂತ ಭಟ್ ಅವರು ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಕಂಪನಿಯ ಕೆಫೆಟೇರಿಯಾ ಭಾಗದ ಬಾಲ್ಕನಿಯಲ್ಲಿ ನಿಂತು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೋಗಿಲು ವಿವಾದ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ, ಸಚಿವ ಜಮೀರ್ ಹೇಳಿದ್ದು ಏನು?

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

ಟ್ರಂಪ್ ವಾರ್ನಿಂಗ್ ಗೆ 'ಕ್ಯಾರೆ ಎನ್ನದ' ಇರಾನ್! ಕಠಿಣ ಪ್ರತೀಕಾರದ ತಿರುಗೇಟು ನೀಡಿದ ಅಧ್ಯಕ್ಷ ಮಸೌದ್!

ನಮ್ಮದು 4ನೇ ಅತಿದೊಡ್ಡ ಆರ್ಥಿಕತೆ ಎಂದು ಭಾರತ ಹೇಳಿಕೊಳ್ಳುತ್ತಿದೆ; ಆದರೆ ತಲಾವಾರು ಜಿಡಿಪಿ 12 ಪಟ್ಟು ಕಡಿಮೆ!

SCROLL FOR NEXT