ವೀರೇಂದ್ರ ಪಪ್ಪಿ - ಪತ್ತೆಯಾದ ಚಿನ್ನದ ಗಟ್ಟಿಗಳು 
ರಾಜ್ಯ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ED ಪ್ರಕರಣದಲ್ಲಿ ಜಾಮೀನು ಮಂಜೂರು

ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ.

ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ, ಮುಂಬೈ ಸೇರಿದಂತೆ ಪಪ್ಪಿಗೆ ಸಂಬಂಧಿಸಿದ ಎಲ್ಲ ಸ್ಥಳಗಳ ಮೇಲೆ ರೇಡ್​​ ನಡೆದಿತ್ತು. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ್ದ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದರು.

ಪಿಎಂಎಲ್ ಕಾಯ್ದೆಯಡಿ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿ ಇಡಿ ವಿಚಾರಣೆ ನಡೆಸಿತ್ತು. ದಾಳಿ ನಡೆಸಿದ ಬಳಿಕ ಪಪ್ಪಿ ಬ್ಯಾಂಕ್‌ ಖಾತೆಯಿಂದ 55 ಕೋಟಿ ನಗದು ಫ್ರೀಜ್‌ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು.

ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲ್ಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊ, ಕ್ಯಾಸಿನೊ ಜ್ಯುವೆಲ್​ ಹೀಗೆ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ, ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು, ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳನ್ನು ಪಪ್ಪಿ ಹೊಂದಿರೋದು ದಾಳಿ ವೇಳೆ ಬಯಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT