ಟೋಲ್ ಪ್ಲಾಜಾ ಸಾಂದರ್ಭಿಕ ಚಿತ್ರ 
ರಾಜ್ಯ

ಬಂಟ್ವಾಳ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ; ಇಬ್ಬರ ಬಂಧನ

ಲಾರಿ ಚಾಲಕ ಭರತ್(23) ಮತ್ತು ಕ್ಲೀನರ್ ತೇಜಸ್(26) ಅವರನ್ನು ಬಂಧಿಸಲಾಗಿದೆ. ಇಬ್ಬರೂ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದು, ಇತರ ಆರೋಪಿಗಳನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಮಂಗಳೂರು ಸಮೀಪದ ಬಂಟ್ವಾಳ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಡಿಸೆಂಬರ್ 29ರ ಬೆಳಗ್ಗೆ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಬ್ಬಂದಿ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ(25) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಲಾರಿಯೊಂದು ರಸ್ತೆಯ ತಪ್ಪು ಬದಿಯಿಂದ ಟೋಲ್ ಗೇಟ್ ಬಳಿ ಬಂದಿದ್ದು, ಈ ವೇಳೆ ಪ್ರಶಾಂತ್ ಟೋಲ್ ಇನ್‌ಚಾರ್ಜ್ ಆಗಿ ಕರ್ತವ್ಯದಲ್ಲಿದ್ದರು.

ಸಿಬ್ಬಂದಿ ಪದೇ ಪದೇ ವಿನಂತಿಸಿದರೂ ಲಾರಿ ಚಾಲಕ ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿ ಬಲವಂತವಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಣ ಟೋಲ್ ಗೇಟ್ ಸೌಕರ್ಯಕ್ಕೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೋಲ್ ನೌಕರರಾದ ಅಂಕಿತ್ ಮತ್ತು ರೋಹಿತ್ ಆಕ್ಷೇಪ ವ್ಯಕ್ತಪಡಿಸಿದಾಗ, ಚಾಲಕ ಮತ್ತು ಆತನ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಸಿಬ್ಬಂದಿಯನ್ನು ನಿಂದಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಂತರ ಪಿಕಪ್ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಟೋಲ್ ಬೂತ್ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ, ಸಿಬ್ಬಂದಿಯ ಮೇಲೆ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಬಂಟ್ವಾಳ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತಾದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆ, ಬಲಪ್ರಯೋಗ, ಆಸ್ತಿಗೆ ಹಾನಿ ಮತ್ತು ಕಾನೂನುಬಾಹಿರ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಅಪಾಯಕಾರಿ ಚಾಲನೆಗಾಗಿ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 184 (ಇ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತನಿಖೆಯ ನಂತರ, ಲಾರಿ ಚಾಲಕ ಭರತ್(23) ಮತ್ತು ಕ್ಲೀನರ್ ತೇಜಸ್(26) ಅವರನ್ನು ಬಂಧಿಸಲಾಗಿದೆ. ಇಬ್ಬರೂ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದು, ಇತರ ಆರೋಪಿಗಳನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT