ವರ್ಕಳದ ಶಿವಗಿರಿ ಮಠದಲ್ಲಿ ನಡೆದ 93ನೇ ಶಿವಗಿರಿ ಯಾತ್ರಾ ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ  
ರಾಜ್ಯ

ಕೋಗಿಲು ಬಡಾವಣೆ ಜಟಾಪಟಿ ನಡುವೆ ಕೇರಳ ಸಿಎಂ ಪಿಣರಾಯಿ ಜೊತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ

ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಹೊಸ ವರ್ಷಕ್ಕೆ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಸಿಎಂ ಸಿದ್ದರಾಮಯ್ಯನವರೇ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳು, ಶೆಡ್​ಗಳ ತೆರವು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ನೀತಿ ಎಂದು ತೀವ್ರ ಟೀಕೆ ಮಾಡಿದ್ದರು. ಆದರೆ ಕೇರಳ ಸಿಎಂ ವಾಸ್ತವಾಂಶ ಅರಿಯದೆ ಸುಮ್ಮನೆ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ವಾಗ್ದಾಳಿ ನಡೆಸಿದ್ದರು.

ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಹೊಸ ವರ್ಷಕ್ಕೆ ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಸಿಎಂ ಸಿದ್ದರಾಮಯ್ಯನವರೇ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದಾರೆ. ಇಂದು ಕೇರಳದ ವರ್ಕಳದಲ್ಲಿ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ರಾಜಧಾನಿ ತಿರುವನಂತಪುರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕೇರಳ ಸಿಎಂ ಪಿಣರಾಯಿ ವಿಜಯನ್​​ರನ್ನು ಭೇಟಿಯಾಗಿ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ.

ಶಿವಗಿರಿ ಮಠಕ್ಕೆ ಭೇಟಿ

ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್​​​​, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

ಕೇರಳದ ವರ್ಕಳದಲ್ಲಿ ನಡೆಯಲಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಬ್ರಹ್ಮಶ್ರೀ ಜ್ಞಾನತೀರ್ಥ ಸ್ವಾಮೀಜಿಯವರು ಹಾಗೂ ಗುರುಗಳ ಅನುಯಾಯಿಗಳಿಂದ ದೊರೆತ ಆತ್ಮೀಯ ಸ್ವಾಗತದಿಂದ ಹರ್ಷಿತನಾದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ ಸಮಾನತೆಯ ಬೆಳಕು ಹರಿಸಿದ ನಾರಾಯಣ ಗುರುಗಳು ನಡೆದಾಡಿದ ನೆಲದಲ್ಲಿ ಜರುಗಲಿರುವ ಯಾತ್ರಾರ್ಥಿಗಳ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಾನು ಕಾತುರನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!