ಸಚಿವ ರಾಮಲಿಂಗಾ ರೆಡ್ಡಿ. 
ರಾಜ್ಯ

ಚಲಿಸುತ್ತಿರುವ ಬಸ್ ಹತ್ತಲು ಪ್ರಯತ್ನಿಸಬೇಡಿ: ಸಾರ್ವಜನಿಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭ ನಗರದ ಬಳಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನ ಚಕ್ರಗಳ ಕೆಳಗೆ ಸಿಲುಕಿದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

ಬೆಂಗಳೂರು: ಚಲಿಸುತ್ತಿರುವ ಬಸ್'ಗಳನ್ನು ಹತ್ತಲು ಪ್ರಯತ್ನಿಸಬೇಡಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭ ನಗರದ ಬಳಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನ ಚಕ್ರಗಳ ಕೆಳಗೆ ಸಿಲುಕಿದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

ಒಬ್ಬ ವ್ಯಕ್ತಿ ಚಲಿಸುತ್ತಿರುವ ಬಸ್ಸನ್ನು ಹತ್ತಯಲು ಪ್ರಯತ್ನಿಸಿದರೆ ಅಥವಾ ಬಸ್ ಹತ್ತುವಾಗ ನಿರ್ಲಕ್ಷ್ಯ ವಹಿಸಿದರೆ ಅಥವಾ ಫುಟ್‌ಬೋರ್ಡ್‌ನಲ್ಲಿ ನಿಂತಾಗಲೂ ಕೂಡ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಈ ವಿಷಯಗಳ ಬಗ್ಗೆ ನಾವು ಈಗಾಗಲೇ ಜಾಗೃತಿ ಮೂಡಿಸಿದ್ದೇವೆ, ಆದರೆ ಜನರು ಅದೇ ತಪ್ಪನ್ನು ಮಾಡುತ್ತಿದ್ದಾರೆಂದು ಹೇಳಿದರು.

ಬಿಎಂಟಿಸಿ 6,500 ಕ್ಕೂ ಹೆಚ್ಚು ಬಸ್‌ಗಳನ್ನು ಹೊಂದಿದ್ದು, ಬಸ್ ಗಳ ಕೊರತೆಯಿಲ್ಲ. ರಾಜಧಾನಿ ಬೆಂಗಳೂರಿನ ಜನರು ಆತಂಕ ಪಡುವ ಅಗತ್ಯವಿಲ್ಲ. ಒಂದು ಬಸ್ ಮಿಸ್ ಆದರೂ, ಮುಂದಿನ ವಾಹನಕ್ಕಾಗಿ ಕಾಯಬೇಕು. ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಬದಲು ತಮ್ಮ ಗಮ್ಯಸ್ಥಾನವನ್ನು ತಲುಪಲು ಮತ್ತೊಂದು ಬಸ್ ಹತ್ತಬೇಕು ಎಂದು ತಿಳಿಸಿದರು.

ಬಸ್ ಪ್ರಯಾಣಿಕ ವೇದಿಕೆಯ ಸದಸ್ಯ ವಿನಯ್ ಶ್ರೀನಿವಾಸ ಅವರು ಮಾತನಾಡಿ,. ಕೆಲವು ಸ್ಥಳಗಳಲ್ಲಿ ಬಸ್‌ಗಳ ಕೊರತೆಯಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಗಮ್ಯಸ್ಥಾನಗಳನ್ನು ತಲುಪುವಲ್ಲಿ ವಿಳಂಬವಾಗುತ್ತದೆ ಎಂದು ಆತಂಕಗೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಬಸ್‌ಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಮತ್ತು ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಂಟಿಸಿ, ಬಸ್ ಚಾಲಕನಿಂದ ಯಾವುದೇ ತಪ್ಪಿಲ್ಲ ಎಂದು ಹೇಳಿದೆ. ಆದಾಗ್ಯೂ, ಪ್ರಯಾಣಿಕರು ಬಸ್‌ಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಜಾಗರೂಕರಾಗಿರುವಂತೆ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!

SCROLL FOR NEXT