ಕೆಎಂಎಫ್ 
ರಾಜ್ಯ

KMF ನೌಕರರ ಮುಷ್ಕರ ಮುಂದೂಡಿಕೆ: ಬೇಡಿಕೆ ಈಡೇರಿಕೆಗೆ ಫೆಬ್ರವರಿ 7 ಗಡುವು

ಸಂಘದ ಸದಸ್ಯರು ಈ ಹಿಂದೆ ಜನವರಿ 23 ರಂದು ಕೆಎಂಎಫ್ ಆಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ಜ್ಞಾಪನ ಪತ್ರವನ್ನು ಸಲ್ಲಿಸಿದ್ದರು.

ಬೆಂಗಳೂರು: ಕೆಎಂಎಫ್‍ನಲ್ಲಿ ನೌಕರರ ವೇತನ, ಸಂಬಳ, ಭತ್ಯೆ, ಸಾರಿಗೆಯ ವ್ಯವಸ್ಥೆಯಲ್ಲಿ ತಾರತಮ್ಯ ನಡೆಯುತ್ತಿದ್ದು, ಸರಕಾರಿ ನೌಕರರಿಗೆ ಇರುವಂತಹ ಸೌಲಭ್ಯಗಳ ಸಮಾನ ವ್ಯವಸ್ಥೆ ಕಲ್ಪಿಸಬೇಕೆಂದು ಕೆಎಂಎಫ್ ಅಧಿಕಾರಿಗಳ ಸಂಘ ಒತ್ತಾಯಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸಲು ಇನ್ನೂ ಒಂದು ವಾರದ ಗಡುವು ನೀಡಿದ್ದು ಮುಷ್ಕರವನ್ನು ಮುಂದೂಡಲಾಗಿದೆ.

ಹಾಲು ಮತ್ತು ಇತರ ಡೈರಿ ಉತ್ಪನ್ನಗಳ ಪೂರೈಕೆ ಮತ್ತು ಖರೀದಿಯನ್ನು ಇನ್ನೊಂದು ವಾರ ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸುವುದಾಗಿ ಭರವಸೆ ಸಂಘ ಭರವಸೆ ನೀಡಿದೆ. ಗ್ರಾಹಕರ ಅಗತ್ಯದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಂದು ವಾರದ ಸಮಯ ಕೋರಿರುವುದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಗೋವಿಂದೇಗೌಡ ಹೇಳಿದರು. "ಬೇಡಿಕೆಗಳನ್ನು ಪರಿಶೀಲಿಸಲು ನಾವು ಸರ್ಕಾರ ಮತ್ತು ಕೆಎಂಎಫ್ ಆಡಳಿತಕ್ಕೆ ಫೆಬ್ರವರಿ 7 ರವರೆಗೆ ಸಮಯ ನೀಡಿದ್ದೇವೆ. ಅಲ್ಲಿಯವರೆಗೆ ಈಡೇರದಿದ್ದರೇ ಮುಷ್ಕರ ನಡೆಸುವ ಮುಂದಿನ ಕ್ರಮವನ್ನು ನಾವು ನಿರ್ಧರಿಸುತ್ತೇವೆ. ಫೆಬ್ರವರಿ 10 ರಂದು ನಾವು ಮತ್ತೊಂದು ಸಂಘದ ಸಭೆಯನ್ನು ನಡೆಸಲಿದ್ದೇವೆ" ಎಂದು ಅವರು ಹೇಳಿದರು.

ಸಂಘದ ಸದಸ್ಯರು ಈ ಹಿಂದೆ ಜನವರಿ 23 ರಂದು ಕೆಎಂಎಫ್ ಆಡಳಿತ ಮತ್ತು ರಾಜ್ಯ ಸರ್ಕಾರಕ್ಕೆ ಜ್ಞಾಪನ ಪತ್ರವನ್ನು ಸಲ್ಲಿಸಿದ್ದರು, ಜನವರಿ 31 ರವರೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಮಯ ನೀಡಿದ್ದರು. ನಾವು ಈಗ ಅವರಿಗೆ ಎರಡನೇ ಅವಕಾಶ ನೀಡುತ್ತಿದ್ದೇವೆ" ಎಂದು ಗೋವಿಂದೇಗೌಡ ತಿಳಿಸಿದ್ದಾರೆ.

7 ನೇ ವೇತನ ಆಯೋಗದ ಅಡಿಯಲ್ಲಿ ಬಾಕಿ ಇರುವ ವೇತನವನ್ನು ರಾಜ್ಯ ಸರ್ಕಾರವು ಆದಷ್ಟು ಬೇಗ ಪಾವತಿಸಬೇಕು ಎಂದು ಸಂಘವು ಒತ್ತಾಯಿಸಿದೆ. ವೇತನ ಆಯೋಗದ ಪ್ರಕಾರ ಸರ್ಕಾರವು ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಕೊಂಡಿದೆ ಎಂದು ಅವರು ಹೇಳಿದರು. ಇಲ್ಲಿಯವರೆಗೆ ಶೇ. 17 ರಷ್ಟು ವೇತನ ಮಂಜೂರಾಗಿದ್ದು, ಶೇ. 7 ರಷ್ಟು ಬಾಕಿ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT