ಶರಣಾದ ನಕ್ಸಲ್ ರವೀಂದ್ರ 
ರಾಜ್ಯ

ಚಿಕ್ಕಮಗಳೂರು ಜಿಲ್ಲಾಧಿಕಾರಿ, SP ಮುಂದೆ ನಕ್ಸಲ್ ರವೀಂದ್ರ ಶರಣು

ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಮನವೊಲಿಸಿದ್ದು, ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹಾಗೂ ಎಸ್​ಪಿ ವಿಕ್ರಮ್ ಆಮ್ಟೆ ಅವರ‌ ಮುಂದೆ ಶರಣಾದರು.

ಚಿಕ್ಕಮಗಳೂರು: ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಆರು ನಕ್ಸಲ್​ರು ಶರಣಾಗಿದ್ದರು. ಈ ವೇಳೆ ಶರಣಾಗದೆ ಉಳಿದಿದ್ದ ನಕ್ಸಲ್ ರವೀಂದ್ರ(ರವಿ) ಅವರು ಶನಿವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಮನವೊಲಿಸಿದ್ದು, ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹಾಗೂ ಎಸ್​ಪಿ ವಿಕ್ರಮ್ ಆಮ್ಟೆ ಅವರ‌ ಮುಂದೆ ಶರಣಾದರು.

ಕಳೆದ‌ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್​ ರವೀಂದ್ರ ಅವರ ವಿರುದ್ಧ ಒಟ್ಟು 26 ಪ್ರಕರಣಗಳಿವೆ. ನಕ್ಸಲ್​ ರವೀಂದ್ರ ವಿರುದ್ಧ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಕೇಸ್ ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 14 ಪ್ರಕರಣಗಳು ದಾಖಲಾಗಿವೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ, 18 ವರ್ಷಗಳಿಂದ ನಕ್ಸಲ್​​ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್​ರ ನಾಯಕ ವಿಕ್ರಮ್ ಗೌಡ ಎನ್​ಕೌಂಟರ್​ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು.

ರವೀಂದ್ರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹರಸಾಹಸ ಪಟ್ಟಿತ್ತು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಒಪ್ಪಿ ರವಿಂದ್ರ ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT