ಶರಣಾದ ನಕ್ಸಲ್ ರವೀಂದ್ರ 
ರಾಜ್ಯ

ಚಿಕ್ಕಮಗಳೂರು ಜಿಲ್ಲಾಧಿಕಾರಿ, SP ಮುಂದೆ ನಕ್ಸಲ್ ರವೀಂದ್ರ ಶರಣು

ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಮನವೊಲಿಸಿದ್ದು, ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹಾಗೂ ಎಸ್​ಪಿ ವಿಕ್ರಮ್ ಆಮ್ಟೆ ಅವರ‌ ಮುಂದೆ ಶರಣಾದರು.

ಚಿಕ್ಕಮಗಳೂರು: ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಆರು ನಕ್ಸಲ್​ರು ಶರಣಾಗಿದ್ದರು. ಈ ವೇಳೆ ಶರಣಾಗದೆ ಉಳಿದಿದ್ದ ನಕ್ಸಲ್ ರವೀಂದ್ರ(ರವಿ) ಅವರು ಶನಿವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರು ರವೀಂದ್ರನ ಜತೆ ಮಾತುಕತೆ ನಡೆಸಿ ಮನವೊಲಿಸಿದ್ದು, ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹಾಗೂ ಎಸ್​ಪಿ ವಿಕ್ರಮ್ ಆಮ್ಟೆ ಅವರ‌ ಮುಂದೆ ಶರಣಾದರು.

ಕಳೆದ‌ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್​ ರವೀಂದ್ರ ಅವರ ವಿರುದ್ಧ ಒಟ್ಟು 26 ಪ್ರಕರಣಗಳಿವೆ. ನಕ್ಸಲ್​ ರವೀಂದ್ರ ವಿರುದ್ಧ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಕೇಸ್ ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 14 ಪ್ರಕರಣಗಳು ದಾಖಲಾಗಿವೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ, 18 ವರ್ಷಗಳಿಂದ ನಕ್ಸಲ್​​ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್​ರ ನಾಯಕ ವಿಕ್ರಮ್ ಗೌಡ ಎನ್​ಕೌಂಟರ್​ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು.

ರವೀಂದ್ರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹರಸಾಹಸ ಪಟ್ಟಿತ್ತು. ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಒಪ್ಪಿ ರವಿಂದ್ರ ಶರಣಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT