ಸಚಿವ ಎಚ್. ಕೆ. ಪಾಟೀಲ್ 
ರಾಜ್ಯ

ಮೈಕ್ರೋಫೈನಾನ್ಸ್ ಕಂಪನಿ ಹಾವಳಿ ತಡೆಗೆ ಕಾನೂನು: ಸುಗ್ರೀವಾಜ್ಞೆ ಕರಡು ಮುಖ್ಯಮಂತ್ರಿಗೆ ರವಾನೆ

ಮೈಕ್ರೋ ಫೈನಾನ್ಸ್ ಕಂಪನಿಗಳು ಅಮಾನವೀಯ ರೀತಿಯಲ್ಲಿ ಸಾಲಗಾರರಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಅಪಾರ ಹಿಂಸೆ ನೀಡುತ್ತಿವೆ.

ಗದಗ: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆಯುವವರನ್ನು ರಕ್ಷಿಸುವ ಸುಗ್ರೀವಾಜ್ಞೆಯ ಕರಡು ಸಿದ್ಧವಾಗಿದ್ದು, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಭಾನುವಾರ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ ನಂತರ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಂಪನಿಗಳು ಅಮಾನವೀಯ ರೀತಿಯಲ್ಲಿ ಸಾಲಗಾರರಿಂದ ಹಣವನ್ನು ವಸೂಲಿ ಮಾಡುತ್ತಿದ್ದು, ಅಪಾರ ಹಿಂಸೆ ನೀಡುತ್ತಿವೆ. ಈ ಹಿನ್ನೆಲೆಯಲ್ಲಿ ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡು ಸಿದ್ಧಪಡಿಸಿದೆ. ಅದನ್ನು ಪರಿಶೀಲನೆಗಾಗಿ ಮುಖ್ಯಮಂತ್ರಿಗೆ ಕಳುಹಿಸಲಾಗಿದೆ.ಅವರು ಒಪ್ಪಿಗೆ ನೀಡಿದ ನಂತರ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಪಾಟೀಲ್ ಹೇಳಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳ ಏಜೆಂಟರ ದುಷ್ಕೃತ್ಯಗಳಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದರೆ, ಮತ್ತೆ ಕೆಲವರು ಮನೆ ಬಿಟ್ಟು ಬೇರೆಡೆಗೆ ಓಡಿ ಹೋಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಈ ಕಂಪನಿಗಳು ಸಾಲ ವಸೂಲಾತಿಗಾಗಿ ಗೂಂಡಾಗಳನ್ನು ನೇಮಿಸಿಕೊಳ್ಳುವ ಮೂಲಕ ಬಡವರಿಗೆ ಕಿರುಕುಳ ನೀಡುತ್ತಿವೆ ಎಂದು ಈ ಹಿಂದೆ ಮುಖ್ಯಮಂತ್ರಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ