ತೊಂಬಟ್ಟು ಲಕ್ಷ್ಮೀ 
ರಾಜ್ಯ

ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮೀ ಮುಖ್ಯವಾಹಿನಿಗೆ; ಎಸ್ಪಿ ಕಚೇರಿಯಲ್ಲಿ ಶರಣಾಗತಿ

ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಉಡುಪಿ: ಹಲವು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ನಕ್ಸಲ್ ಲಕ್ಷ್ಮೀ ಭಾನುವಾರ (ಫೆ.2) ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.

ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆ ನಕ್ಸಲ್ ಲಕ್ಷ್ಮಿ, ಎಸ್‌ಪಿ ಕಚೇರಿಗೆ ಆಗಮಿಸಿದರು.

ಅಲ್ಲಿ ಶರಣಾಗತಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಬಳಿಕ ಭದ್ರತೆಯೊಂದಿಗೆ ಡಿಸಿ ಕಚೇರಿಗೆ ಲಕ್ಷ್ಮಿಯನ್ನು ಪೊಲೀಸರು ಕರೆದೊಯ್ದರು. ಶರಣಾದ ನಕ್ಸಲ್ ಜೊತೆ ಆಕೆಯ ಸಹೋದರ ಮತ್ತು ಬಂಧುಗಳು ಹಾಜರಿದ್ದರು.

ನಕ್ಸಲ್‌ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಲಕ್ಷ್ಮೀಯವರು 2006 ಮಾರ್ಚ್ 6ರಂದು ಊರು ತೊರೆದಿದ್ದರು. ಅವರು ನಕ್ಸಲ್ ಹೋರಾಟದಲ್ಲಿ ಸಕ್ರಿಯರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT