ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಕ್ರೋಫೈನಾನ್ಸ್ ಕಿರುಕುಳ: ಆನ್‌ಲೈನ್ ಪೋರ್ಟಲ್ ಸ್ಥಾಪನೆಗೆ ಸರ್ಕಾರ ಮುಂದು!

ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು.

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹೊಸ ಕಾನೂನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಸಚಿವ ಎಚ್‌ಕೆ ಪಾಟೀಲ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಶನಿವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ, ಸಾಲ ವಿತರಣೆಗಳ ವಿವರಗಳನ್ನು ಪತ್ತೆಹಚ್ಚಲು ಮತ್ತು ನವೀಕರಿಸಲು ಆನ್‌ಲೈನ್ ಪೋರ್ಟಲ್, ಪಾರದರ್ಶಕತೆಯನ್ನು ಖಚಿತಪಡಿಸುವುದು ಮತ್ತು ಬಡವರನ್ನು ಸಾಲ ಚಕ್ರಗಳಲ್ಲಿ ಸಿಲುಕಿಸುವ ಚಕ್ರ ಬಡ್ಡಿ ಸಾಲವನ್ನು ತಡೆಗಟ್ಟುವುದು ಸೇರಿದಂತೆ ಹಲವಾರು ಪ್ರಮುಖ ವಿಚಾರಗಳ ಕುರಿತು ಚರ್ಚೆಗಳು ನಡೆದವು.

ಈ ವೇಳೆ ಸಚಿವರು ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ ರಿಸರ್ವ್ ಬ್ಯಾಂಕ್ ನೀತಿಗೆ ಅನುಗುಣವಾಗಿರಬೇಕು. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಬದುದು. ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರವನ್ನು ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC - AC ಒಳಗೊಂಡ ಒಂಬುಡ್ಸ್ಮನ್ ನೇಮಕ ಮಾಡಬೇಕು.

ಈ ಕಂಪೆನಿಗಳು ಸಾಲದ ಹೆಸರಲ್ಲಿ ಬಡ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂದು ತಿಳಿಸಿದ್ದು, ಈ ಪ್ರಮುಖ ಅಂಶಗಳನ್ನು ಕಾನೂನಿನಲ್ಲಿ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT