ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಕ್ರೋಫೈನಾನ್ಸ್ ಕಿರುಕುಳ: ಆನ್‌ಲೈನ್ ಪೋರ್ಟಲ್ ಸ್ಥಾಪನೆಗೆ ಸರ್ಕಾರ ಮುಂದು!

ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು.

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹೊಸ ಕಾನೂನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಸಚಿವ ಎಚ್‌ಕೆ ಪಾಟೀಲ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಶನಿವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ, ಸಾಲ ವಿತರಣೆಗಳ ವಿವರಗಳನ್ನು ಪತ್ತೆಹಚ್ಚಲು ಮತ್ತು ನವೀಕರಿಸಲು ಆನ್‌ಲೈನ್ ಪೋರ್ಟಲ್, ಪಾರದರ್ಶಕತೆಯನ್ನು ಖಚಿತಪಡಿಸುವುದು ಮತ್ತು ಬಡವರನ್ನು ಸಾಲ ಚಕ್ರಗಳಲ್ಲಿ ಸಿಲುಕಿಸುವ ಚಕ್ರ ಬಡ್ಡಿ ಸಾಲವನ್ನು ತಡೆಗಟ್ಟುವುದು ಸೇರಿದಂತೆ ಹಲವಾರು ಪ್ರಮುಖ ವಿಚಾರಗಳ ಕುರಿತು ಚರ್ಚೆಗಳು ನಡೆದವು.

ಈ ವೇಳೆ ಸಚಿವರು ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ ರಿಸರ್ವ್ ಬ್ಯಾಂಕ್ ನೀತಿಗೆ ಅನುಗುಣವಾಗಿರಬೇಕು. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಬದುದು. ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರವನ್ನು ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC - AC ಒಳಗೊಂಡ ಒಂಬುಡ್ಸ್ಮನ್ ನೇಮಕ ಮಾಡಬೇಕು.

ಈ ಕಂಪೆನಿಗಳು ಸಾಲದ ಹೆಸರಲ್ಲಿ ಬಡ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂದು ತಿಳಿಸಿದ್ದು, ಈ ಪ್ರಮುಖ ಅಂಶಗಳನ್ನು ಕಾನೂನಿನಲ್ಲಿ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ