ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 
ರಾಜ್ಯ

Aero India 2025: ಬೆಂಗಳೂರು ಏರ್‌ಪೋರ್ಟ್‌ ವಿಮಾನ ಹಾರಾಟದಲ್ಲಿ ವ್ಯತ್ಯಯ; ಇಲ್ಲಿದೆ ವಿವರ...

ಫೆಬ್ರವರಿ 5ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2025ಕ್ಕೆ ದಿನಗಣನೆ ಶುರುವಾಗಿದ್ದು, ಈ ನಡುವಲ್ಲೇ ವಾಯುಪ್ರದೇಶವನ್ನು ಮುಚ್ಚುವ ಪರಿಷ್ಕೃತ ಸಮಯ ಪಟ್ಟಿಯನ್ನು ಕೆಐಎ ಪ್ರಕಟಿಸಿದೆ.

ಫೆಬ್ರವರಿ 5 ರಿಂದ 14ರವರೆಗೆ ಕೆಲ ಅವಧಿಗಳಲ್ಲಿ ವಾಯುಪ್ರದೇಶವನ್ನು ಮುಚ್ಚುವುದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.

ಪರಿಷ್ಕೃತ ಸಮಯದ ಪಟ್ಟಿ ಇಂತಿದೆ..

  • ಫೆಬ್ರವರಿ 5, 6 ಮತ್ತು 8ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ

  • ಫೆಬ್ರವರಿ 7 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30ರವರೆಗೆ

  • ಫೆಬ್ರವರಿ 8 ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 3ರಿಂದ 4.30 ರವರೆಗೆ

  • ಫೆಬ್ರವರಿ 9 ಬೆಳಿಗ್ಗೆ 9ರಿಂದ 11ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4.30 ರವರೆಗೆ

  • ಫೆಬ್ರವರಿ 10ರಂದು ಬೆಳಿಗ್ಗೆ 9ರಿಂದ 11.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 3.30ರವರೆಗೆ.

  • ಫೆಬ್ರವರಿ 11 ಮತ್ತು 12ರಂದು ಮಧ್ಯಾಹ್ನ 12ರಿಂದ 2.30ರವರೆಗೆ.

  • ಫೆಬ್ರವರಿ 13 ಮತ್ತು 14ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ತಿಳಿಸಿದೆ.

ಏಷ್ಯಾದ ಅತಿ ದೊಡ್ಡ ಏರ್ ಶೋ ಯಲಹಂಕದ ವಾಯನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರಗೆ ನಡೆಯಲಿದ್ದು, ದೇಶ ವಿದೇಶಗಳ ಅನೇಕ ಗಣ್ಯರು, ಉದ್ಯಮಿಗಳು, ವಾಯುಪಡೆಗಳ ಸಿಬ್ಬಂದಿ ಆಗಮಿಸಲಿದ್ದಾರೆ. ಆಕರ್ಷಕ ಏರ್ ಶೋ ಕೂಡ ನಡೆಯಲಿದೆ.

ಏರ್ ಶೋಗೆ ಆಗಮಿಸುವವರಿಗೆ ಪಾರ್ಕಿಂಗ್ ವ್ಯವಸ್ಥೆ, ಉಚಿತ ಬಸ್ ವ್ಯವಸ್ಥೆಯನ್ನು ವಾಯುಪಡೆ ಮಾಡುತ್ತಿದೆ. 15ನೇ ಆವೃತ್ತಿಯ ಏರ್ ಶೋ ಇದಾಗಿದ್ದು, ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT